ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm