ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm