ಬ್ರೇಕಿಂಗ್ ನ್ಯೂಸ್
01-04-21 12:36 pm Source: FILMIBEAT Bharath Kumar K ಸಿನಿಮಾ
ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಆಶಿತಾ ಚಂದ್ರಪ್ಪ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ನೀಲಿ, ಜೊತೆ ಜೊತೆಯಲಿ, ರಾಧ ರಮಣ ಅಂತಹ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ನಟಿ ಇಂದು (ಮಾರ್ಚ್ 31) ಸಪ್ತಪದಿ ತುಳಿದಿದ್ದಾರೆ. ರೋಹನ್ ರಾಘವೇಂದ್ರ ಎನ್ನುವವರ ಜೊತೆ ವೈವಾಹಿಕ ಬದುಕು ಆರಂಭಿಸಿರುವ ನಟಿ ಆಶಿತಾ ಚಂದ್ರಪ್ಪಗೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ಕೊರೊನಾ ವೈರಸ್ ಭೀತಿ ಕಾರಣದಿಂದ ಹೆಚ್ಚು ಜನರಿಗೆ ಮದುವೆ ಆಹ್ವಾನ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಹೊಸ ಜೀವನ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಶಿತಾ ಚಂದ್ರಪ್ಪ ಮದುವೆ ಆಗಿರುವ ರೋಹನ್ ರಾಘವೇಂದ್ರ ಅವರ ಕುರಿತು ಹೆಚ್ಚಾಗಿ ತಿಳಿದಿಲ್ಲ. ಇನ್ನು ಆಶಿತಾ ಅವರ ವಿವಾಹ ಕಾರ್ಯಕ್ರಮದಲ್ಲಿ ಕಿರುತೆರೆ ನಟ ಕಾರ್ತಿಕ್ ಜಯರಾಂ, ನಟಿ ತೇಜಸ್ವಿನಿ ಪ್ರಕಾಶ್, ಜಗನ್ನಾಥ್ ಚಂದ್ರಶೇಖರ್ ಸೇರಿದಂತೆ ಕೆಲವರು ಮಾತ್ರ ಪಾಲ್ಗೊಂಡಿದ್ದರು. ಆಶಿತಾ ಮತ್ತು ರೋಹನ್ ದಂಪತಿಗೆ ನಟ ಜೆಕೆ ಶುಭಕೋರಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಶಿತಾ ಜೊತೆಗಿನ ಫೋಟೋ ಹಂಚಿಕೊಂಡಿರುವ ಕಾರ್ತಿಕ್ ಜಯರಾಂ ''ನಿನ್ನ ದಾಂಪತ್ಯ ಬದುಕು ಸದಾ ಸಂತಸದಿಂದ ಕೂಡಿರಲಿ'' ಎಂದು ಹಾರೈಸಿದ್ದಾರೆ.
ಕಿರುತೆರೆಯಲ್ಲಿ ಮಾತ್ರವಲ್ಲ ಸಿನಿಮಾರಂಗದಲ್ಲಿ ಆಶಿತಾ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರೀತಿಯಿಂದ ಅಣ್ಣ ಎಂದೇ ಕರೆಯುವ ಆಶಿತಾ ಡಿ ಬಾಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
This News Article Is A Copy Of FILMIBEAT
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm