ಬ್ರೇಕಿಂಗ್ ನ್ಯೂಸ್
01-04-21 12:36 pm Source: FILMIBEAT Bharath Kumar K ಸಿನಿಮಾ
ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಆಶಿತಾ ಚಂದ್ರಪ್ಪ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ನೀಲಿ, ಜೊತೆ ಜೊತೆಯಲಿ, ರಾಧ ರಮಣ ಅಂತಹ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ನಟಿ ಇಂದು (ಮಾರ್ಚ್ 31) ಸಪ್ತಪದಿ ತುಳಿದಿದ್ದಾರೆ. ರೋಹನ್ ರಾಘವೇಂದ್ರ ಎನ್ನುವವರ ಜೊತೆ ವೈವಾಹಿಕ ಬದುಕು ಆರಂಭಿಸಿರುವ ನಟಿ ಆಶಿತಾ ಚಂದ್ರಪ್ಪಗೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ಕೊರೊನಾ ವೈರಸ್ ಭೀತಿ ಕಾರಣದಿಂದ ಹೆಚ್ಚು ಜನರಿಗೆ ಮದುವೆ ಆಹ್ವಾನ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಹೊಸ ಜೀವನ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಶಿತಾ ಚಂದ್ರಪ್ಪ ಮದುವೆ ಆಗಿರುವ ರೋಹನ್ ರಾಘವೇಂದ್ರ ಅವರ ಕುರಿತು ಹೆಚ್ಚಾಗಿ ತಿಳಿದಿಲ್ಲ. ಇನ್ನು ಆಶಿತಾ ಅವರ ವಿವಾಹ ಕಾರ್ಯಕ್ರಮದಲ್ಲಿ ಕಿರುತೆರೆ ನಟ ಕಾರ್ತಿಕ್ ಜಯರಾಂ, ನಟಿ ತೇಜಸ್ವಿನಿ ಪ್ರಕಾಶ್, ಜಗನ್ನಾಥ್ ಚಂದ್ರಶೇಖರ್ ಸೇರಿದಂತೆ ಕೆಲವರು ಮಾತ್ರ ಪಾಲ್ಗೊಂಡಿದ್ದರು. ಆಶಿತಾ ಮತ್ತು ರೋಹನ್ ದಂಪತಿಗೆ ನಟ ಜೆಕೆ ಶುಭಕೋರಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಶಿತಾ ಜೊತೆಗಿನ ಫೋಟೋ ಹಂಚಿಕೊಂಡಿರುವ ಕಾರ್ತಿಕ್ ಜಯರಾಂ ''ನಿನ್ನ ದಾಂಪತ್ಯ ಬದುಕು ಸದಾ ಸಂತಸದಿಂದ ಕೂಡಿರಲಿ'' ಎಂದು ಹಾರೈಸಿದ್ದಾರೆ.
ಕಿರುತೆರೆಯಲ್ಲಿ ಮಾತ್ರವಲ್ಲ ಸಿನಿಮಾರಂಗದಲ್ಲಿ ಆಶಿತಾ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರೀತಿಯಿಂದ ಅಣ್ಣ ಎಂದೇ ಕರೆಯುವ ಆಶಿತಾ ಡಿ ಬಾಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm