ಬ್ರೇಕಿಂಗ್ ನ್ಯೂಸ್
01-04-21 01:40 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ನ ಖ್ಯಾತ ನಟಿ ಮತ್ತು ಗಾಯಕಿ ಹಾಗೂ ರಾಜಕಾರಣಿ ಕಿರಣ್ ಖೇರ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಚಂಡೀಗಢದ ಸಂಸದೆಯಾಗಿರುವ ಕಿರಣ್ ಖೇರ್ ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಸದ್ಯ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಬಿಜೆಪಿ ಅಧ್ಯಕ್ಷ ಅರುಣ್ ಸೂದ್ ಬಹಿರಂಗ ಪಡಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಸೂದ್, ಕಳೆದ ವರ್ಷದಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಿರಣ್ ಖೇರ್ ಕಳೆದ ವರ್ಷ ನವೆಂಬರ್ನಲ್ಲಿ ತನ್ನ ಚಂಡೀಗಢ್ ನಿವಾಸದಲ್ಲಿ ಎಡಗೈಗೆ ಗಾಯ ಮಾಡಿದ್ದ ಕಿರಣ್ ಖೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಸಮಯದಲ್ಲಿ ಕಿರಣ್ ಖೇರ್ ಅನಾರೋಗ್ಯದಿಂದ ಬಳಲುತ್ತಿದ್ದ ಬಗ್ಗೆ ಬಹಿರಂಗವಾಗಿದೆ. ಬಳಿಕ ಅವರು ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿರುವ ಕಿರಣ್ ಖೇರ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆಗಾಗ ಕೋಕಿಲಾಬೆನ್ ಆಸ್ಪತ್ರೆಗೆ ಭೇಟಿ ಆರೋಗ್ಯ ತಪಾಸಣೆ ನಡೆಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ನಟಿ ಕಿರಣ್ ಖೇರ್ 2014ರಲ್ಲಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಜಕೀಯದಲ್ಲಿ ಮೊದಲ ಹೆಜ್ಜೆ ಇಟ್ಟಿದ್ದರು. ಮೋದಿ ಅಲೆಯ ಮೇಲೆ ಸವಾರಿ ಮಾಡಿದ ಕಿರಣ್ 2019ರ ಚುನಾವಣೆಯಲ್ಲಿ ಮತ್ತೆ ಗೆದ್ದು ಬೀಗಿದರು. ಕಳೆದ ಒಂದು ವರ್ಷದಿಂದ ಹೆಚ್ಚಾಗಿ ಕಾಣಿಸಿಕೊಳ್ಳದ ಕಿರಣ್ ಖೇರ್ ವಿರುದ್ಧ ಕಾಂಗ್ರೆಸ್ ಭಾರಿ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಚಂಡೀಗಢ್ ಬಿಜೆಪಿ ಅನಾರೋಗ್ಯದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. 68 ವರ್ಷದ ನಟಿ ಮತ್ತು ರಾಜಕಾರಣಿ ಕಿರಣ್ ಖೇರ್ ಸದ್ಯ ಎರಡನೇ ಪತಿ ಅನುಪಮ್ ಖೇರ್ ಜೊತೆ ವಾಸುತ್ತಿದ್ದಾರೆ. ಅನುಪಮ್ ಖೇರ್ ಬಾಲಿವುಡ್ನ ಖ್ಯಾತ ನಟ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಹಿಂದಿ ಮತ್ತು ಪಂಜಾಬಿ ಭಾಷೆಯಲ್ಲಿ ನಟಿಸಿರುವ ಕಿರಣ್ ಖೇರ್ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಸಿನಿಮಾದಲ್ಲಿ ಕಾಣಿಸಿಕೊಂಡಿಲ್ಲ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm