ಬ್ರೇಕಿಂಗ್ ನ್ಯೂಸ್
05-04-21 12:26 pm source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಮರುದಿನ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಸೋಂಕು ತಗುಲಿರುವುದು ಬಹಿರಂಗವಾಗಿದೆ. ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ.
ವರದಿಗಳ ಪ್ರಕಾರ, 100 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 45 ಸಿಬ್ಬಂದಿಗೆ ಸೋಂಕು ಅಂಟಿಕೊಂಡಿದೆ. ಈ ಹಿನ್ನೆಲೆ ಮುಂಬೈನಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದುಗೊಳಿಸಲಾಗಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ನಂತರ ನಿರ್ಮಾಪಕ ವಿಕ್ರಮ್ ಮಲ್ಹೋತ್ರಾ ಚಿತ್ರೀಕರಣ ಮುಂದುವರಿಸಲು ತೀರ್ಮಾನಿಸಿದರು. ಹಾಗಾಗಿ, ಎಲ್ಲಾ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಿದರು. ಈ ವೇಳೆ ಸಿಬ್ಬಂದಿಗಳಿಗೂ ಕೊವಿಡ್ ತಗುಲಿರುವುದು ಬಹಿರಂಗವಾಗಿದೆ. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು.
ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭವಾಗಿತ್ತು. ಇದೀಗ, ಕೊರೊನಾ ಕಾರಣದಿಂದ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ರಾಮ್ ಸೇತು ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ. ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನು ಹಲವು ಸೆಲೆಬ್ರಿಟಿಗಳು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. ಅಕ್ಷಯ್ ಕುಮಾರ್ಗೂ ಮೊದಲು ಆಲಿಯಾ ಭಟ್, ಫಾತಿಮಾ ಸನಾ ಶೇಖ್, ಪರೇಶ್ ರಾವಲ್, ಕಾರ್ತಿಕ್ ಆರ್ಯನ್, ರಣ್ಬೀರ್ ಕಪೂರ್, ರೋಹಿತ್ ಸರಾಫ್ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಈ ಕಡೆ ದಕ್ಷಿಣದಲ್ಲಿ ಕನ್ನಡ ನಟ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿಗೆ, ತಮಿಳು ನಟಿ ನಿವೇತಾ ಥಾಮಸ್, ತೆಲುಗಿನ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ಗೂ ಸೋಂಕು ತಗುಲಿದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm