ಬ್ರೇಕಿಂಗ್ ನ್ಯೂಸ್
05-04-21 12:26 pm source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಮರುದಿನ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಸೋಂಕು ತಗುಲಿರುವುದು ಬಹಿರಂಗವಾಗಿದೆ. ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ.
ವರದಿಗಳ ಪ್ರಕಾರ, 100 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 45 ಸಿಬ್ಬಂದಿಗೆ ಸೋಂಕು ಅಂಟಿಕೊಂಡಿದೆ. ಈ ಹಿನ್ನೆಲೆ ಮುಂಬೈನಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದುಗೊಳಿಸಲಾಗಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ನಂತರ ನಿರ್ಮಾಪಕ ವಿಕ್ರಮ್ ಮಲ್ಹೋತ್ರಾ ಚಿತ್ರೀಕರಣ ಮುಂದುವರಿಸಲು ತೀರ್ಮಾನಿಸಿದರು. ಹಾಗಾಗಿ, ಎಲ್ಲಾ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಿದರು. ಈ ವೇಳೆ ಸಿಬ್ಬಂದಿಗಳಿಗೂ ಕೊವಿಡ್ ತಗುಲಿರುವುದು ಬಹಿರಂಗವಾಗಿದೆ. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು.
ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭವಾಗಿತ್ತು. ಇದೀಗ, ಕೊರೊನಾ ಕಾರಣದಿಂದ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ರಾಮ್ ಸೇತು ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ. ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನು ಹಲವು ಸೆಲೆಬ್ರಿಟಿಗಳು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. ಅಕ್ಷಯ್ ಕುಮಾರ್ಗೂ ಮೊದಲು ಆಲಿಯಾ ಭಟ್, ಫಾತಿಮಾ ಸನಾ ಶೇಖ್, ಪರೇಶ್ ರಾವಲ್, ಕಾರ್ತಿಕ್ ಆರ್ಯನ್, ರಣ್ಬೀರ್ ಕಪೂರ್, ರೋಹಿತ್ ಸರಾಫ್ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಈ ಕಡೆ ದಕ್ಷಿಣದಲ್ಲಿ ಕನ್ನಡ ನಟ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿಗೆ, ತಮಿಳು ನಟಿ ನಿವೇತಾ ಥಾಮಸ್, ತೆಲುಗಿನ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ಗೂ ಸೋಂಕು ತಗುಲಿದೆ.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm