ಬ್ರೇಕಿಂಗ್ ನ್ಯೂಸ್
05-04-21 12:26 pm source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಮರುದಿನ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಸೋಂಕು ತಗುಲಿರುವುದು ಬಹಿರಂಗವಾಗಿದೆ. ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ.
ವರದಿಗಳ ಪ್ರಕಾರ, 100 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 45 ಸಿಬ್ಬಂದಿಗೆ ಸೋಂಕು ಅಂಟಿಕೊಂಡಿದೆ. ಈ ಹಿನ್ನೆಲೆ ಮುಂಬೈನಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದುಗೊಳಿಸಲಾಗಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ನಂತರ ನಿರ್ಮಾಪಕ ವಿಕ್ರಮ್ ಮಲ್ಹೋತ್ರಾ ಚಿತ್ರೀಕರಣ ಮುಂದುವರಿಸಲು ತೀರ್ಮಾನಿಸಿದರು. ಹಾಗಾಗಿ, ಎಲ್ಲಾ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಿದರು. ಈ ವೇಳೆ ಸಿಬ್ಬಂದಿಗಳಿಗೂ ಕೊವಿಡ್ ತಗುಲಿರುವುದು ಬಹಿರಂಗವಾಗಿದೆ. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು.
ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭವಾಗಿತ್ತು. ಇದೀಗ, ಕೊರೊನಾ ಕಾರಣದಿಂದ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ರಾಮ್ ಸೇತು ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ. ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನು ಹಲವು ಸೆಲೆಬ್ರಿಟಿಗಳು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. ಅಕ್ಷಯ್ ಕುಮಾರ್ಗೂ ಮೊದಲು ಆಲಿಯಾ ಭಟ್, ಫಾತಿಮಾ ಸನಾ ಶೇಖ್, ಪರೇಶ್ ರಾವಲ್, ಕಾರ್ತಿಕ್ ಆರ್ಯನ್, ರಣ್ಬೀರ್ ಕಪೂರ್, ರೋಹಿತ್ ಸರಾಫ್ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಈ ಕಡೆ ದಕ್ಷಿಣದಲ್ಲಿ ಕನ್ನಡ ನಟ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿಗೆ, ತಮಿಳು ನಟಿ ನಿವೇತಾ ಥಾಮಸ್, ತೆಲುಗಿನ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ಗೂ ಸೋಂಕು ತಗುಲಿದೆ.
This News Article Is A Copy Of FILMIBEAT
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm