ಬ್ರೇಕಿಂಗ್ ನ್ಯೂಸ್
05-04-21 12:26 pm source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಮರುದಿನ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಸೋಂಕು ತಗುಲಿರುವುದು ಬಹಿರಂಗವಾಗಿದೆ. ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ.
ವರದಿಗಳ ಪ್ರಕಾರ, 100 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 45 ಸಿಬ್ಬಂದಿಗೆ ಸೋಂಕು ಅಂಟಿಕೊಂಡಿದೆ. ಈ ಹಿನ್ನೆಲೆ ಮುಂಬೈನಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದುಗೊಳಿಸಲಾಗಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ನಂತರ ನಿರ್ಮಾಪಕ ವಿಕ್ರಮ್ ಮಲ್ಹೋತ್ರಾ ಚಿತ್ರೀಕರಣ ಮುಂದುವರಿಸಲು ತೀರ್ಮಾನಿಸಿದರು. ಹಾಗಾಗಿ, ಎಲ್ಲಾ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಿದರು. ಈ ವೇಳೆ ಸಿಬ್ಬಂದಿಗಳಿಗೂ ಕೊವಿಡ್ ತಗುಲಿರುವುದು ಬಹಿರಂಗವಾಗಿದೆ. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು.
ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭವಾಗಿತ್ತು. ಇದೀಗ, ಕೊರೊನಾ ಕಾರಣದಿಂದ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ರಾಮ್ ಸೇತು ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ. ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನು ಹಲವು ಸೆಲೆಬ್ರಿಟಿಗಳು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. ಅಕ್ಷಯ್ ಕುಮಾರ್ಗೂ ಮೊದಲು ಆಲಿಯಾ ಭಟ್, ಫಾತಿಮಾ ಸನಾ ಶೇಖ್, ಪರೇಶ್ ರಾವಲ್, ಕಾರ್ತಿಕ್ ಆರ್ಯನ್, ರಣ್ಬೀರ್ ಕಪೂರ್, ರೋಹಿತ್ ಸರಾಫ್ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಈ ಕಡೆ ದಕ್ಷಿಣದಲ್ಲಿ ಕನ್ನಡ ನಟ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿಗೆ, ತಮಿಳು ನಟಿ ನಿವೇತಾ ಥಾಮಸ್, ತೆಲುಗಿನ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ಗೂ ಸೋಂಕು ತಗುಲಿದೆ.
This News Article Is A Copy Of FILMIBEAT
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm