ಬ್ರೇಕಿಂಗ್ ನ್ಯೂಸ್
07-04-21 04:23 pm Headline Karnataka News Network ಸಿನಿಮಾ
ಚೆನ್ನೈ, ಎ.7 ; ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಖ್ಯಾತ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ, ನಟಿ ರಾಧಿಕಾಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಚೆನ್ನೈ ವಿಶೇಷ ನ್ಯಾಯಾಲಯ ಒಂದು ವರ್ಷ ಶಿಕ್ಷೆ ವಿಧಿಸಿದೆ.
ಶರತ್ ಕುಮಾರ್ ಹಾಗೂ ನಟಿ ರಾಧಿಕಾ ದಂಪತಿ ಮೇಲಿನ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಚೆನ್ನೈನ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸಾರಥಿ, ರಾಜಕುಮಾರ್, ಸೀತಾರಾಮ ಕಲ್ಯಾಣ, ಸಂತೆಯಲ್ಲಿ ನಿಂತ ಕಬೀರ ಕನ್ನಡ ಸಿನಿಮಾಗಳಲ್ಲಿ ಶರತ್ ಕುಮಾರ್ ನಟಿಸಿದ್ದಾರೆ. ನಟಿ ರಾಧಿಕಾ ಅವರು ವಿಷ್ಣುವರ್ಧನ್, ದ್ವಾರಕೀಶ್ ಸೇರಿ ಹಲವರ ಜೊತೆ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

ರ್ಯಾಡಿಯೆಂಟ್ ಮೀಡಿಯಾ ದೂರಿನ ಪ್ರಕಾರ, ಪಾಲುದಾರಿಕೆ ಹೊಂದಿದ್ದ ಶರತ್ ಕುಮಾರ್, ರಾಧಿಕಾ, ಲಿಸ್ಟಿನ್ ಅವರು ರ್ಯಾಡಿಯೆಂಟ್ ಸಂಸ್ಥೆಯಿಂದ 1.50 ಕೋಟಿ ರೂಪಾಯಿ ಹಣ ಸಾಲ ಪಡೆದಿದ್ದರು. ಸಾಲಕ್ಕೆ ಭದ್ರತೆಯಾಗಿ ಎರಡು ಚೆಕ್ಗಳನ್ನು ನೀಡಿದ್ದರು. ನಂತರ ಶರತ್ ಕುಮಾರ್ 50 ಲಕ್ಷ ರೂಪಾಯಿ ಕೈಸಾಲ ಪಡೆದು ಹತ್ತು ಲಕ್ಷ ಮೌಲ್ಯದ ಐದು ಚೆಕ್ಗಳನ್ನು ಭದ್ರತೆಯಾಗಿ ನೀಡಿದ್ದರು. ಆದರೆ ಚೆಕ್ಗಳನ್ನು ನಗದು ಮಾಡಿಕೊಳ್ಳಲು ಬ್ಯಾಂಕಿಗೆ ಸಲ್ಲಿಸಿದಾಗ ಏಳೂ ಚೆಕ್ಗಳು ಬೌನ್ಸ್ ಆಗಿವೆ. ಹಾಗಾಗಿ ಶರತ್ ಕುಮಾರ್, ರಾಧಿಕಾ ಹಾಗೂ ಲಿಸ್ಟಿನ್ ವಿರುದ್ಧ ಸಿನಿಮಾ ಫೋನ್ ಯಾನ್ ಸ್ ಸಂಸ್ಥೆಯಾದ ರ್ಯಾಡಿಯಂಟ್ ಮೀಡಿಯಾ ಸಂಸ್ಥೆ ದೂರು ದಾಖಲಿಸಿತ್ತು.
2015 ರಲ್ಲಿ ಶರತ್ ಕುಮಾರ್, ರಾಧಿಕಾ ಒಡೆತನದ 'ಮ್ಯಾಜಿಕ್ ಫ್ರೇಮ್ಸ್' ಸಂಸ್ಥೆಯಿಂದ 'ಇದು ಎನ್ನ ಮಾಯಂ' ಹೆಸರಿನ ತಮಿಳು ಸಿನಿಮಾ ನಿರ್ಮಾಣ ಮಾಡಲಾಗಿತ್ತು. ಸಿನಿಮಾವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ಸಿನಿಮಾದಲ್ಲಿ ಕೀರ್ತಿ ಸುರೇಶ್, ನಟ ವಿಕ್ರಂ ಪ್ರಭು, ಕನ್ನಡದ ನಟಿ ಕಾವ್ಯಾ ಶೆಟ್ಟಿ, ನಾಸರ್ ಅವರುಗಳು ನಟಿಸಿದ್ದರು. ಈ ಸಿನಿಮಾ ನಿರ್ಮಾಣಕ್ಕಾಗಿಯೇ ಶರತ್ ಕುಮಾರ್ ರ್ಯಾಡಿಯೆಂಟ್ ಸಂಸ್ಥೆಯಿಂದ 2 ಕೋಟಿ ಹಣ ಸಾಲ ಪಡೆದಿದ್ದರು.
The Special Court trying cases against MP and MLAs on Wednesday convicted actor couple Sarathkumar, Radhika and one other person in a 2018 cheque bounce case and sentenced them to one year's imprisonment. The court also imposed a penalty of Rs 5 crores in connection with the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am