ಬ್ರೇಕಿಂಗ್ ನ್ಯೂಸ್
07-04-21 04:23 pm Headline Karnataka News Network ಸಿನಿಮಾ
ಚೆನ್ನೈ, ಎ.7 ; ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಖ್ಯಾತ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ, ನಟಿ ರಾಧಿಕಾಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಚೆನ್ನೈ ವಿಶೇಷ ನ್ಯಾಯಾಲಯ ಒಂದು ವರ್ಷ ಶಿಕ್ಷೆ ವಿಧಿಸಿದೆ.
ಶರತ್ ಕುಮಾರ್ ಹಾಗೂ ನಟಿ ರಾಧಿಕಾ ದಂಪತಿ ಮೇಲಿನ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಚೆನ್ನೈನ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸಾರಥಿ, ರಾಜಕುಮಾರ್, ಸೀತಾರಾಮ ಕಲ್ಯಾಣ, ಸಂತೆಯಲ್ಲಿ ನಿಂತ ಕಬೀರ ಕನ್ನಡ ಸಿನಿಮಾಗಳಲ್ಲಿ ಶರತ್ ಕುಮಾರ್ ನಟಿಸಿದ್ದಾರೆ. ನಟಿ ರಾಧಿಕಾ ಅವರು ವಿಷ್ಣುವರ್ಧನ್, ದ್ವಾರಕೀಶ್ ಸೇರಿ ಹಲವರ ಜೊತೆ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

ರ್ಯಾಡಿಯೆಂಟ್ ಮೀಡಿಯಾ ದೂರಿನ ಪ್ರಕಾರ, ಪಾಲುದಾರಿಕೆ ಹೊಂದಿದ್ದ ಶರತ್ ಕುಮಾರ್, ರಾಧಿಕಾ, ಲಿಸ್ಟಿನ್ ಅವರು ರ್ಯಾಡಿಯೆಂಟ್ ಸಂಸ್ಥೆಯಿಂದ 1.50 ಕೋಟಿ ರೂಪಾಯಿ ಹಣ ಸಾಲ ಪಡೆದಿದ್ದರು. ಸಾಲಕ್ಕೆ ಭದ್ರತೆಯಾಗಿ ಎರಡು ಚೆಕ್ಗಳನ್ನು ನೀಡಿದ್ದರು. ನಂತರ ಶರತ್ ಕುಮಾರ್ 50 ಲಕ್ಷ ರೂಪಾಯಿ ಕೈಸಾಲ ಪಡೆದು ಹತ್ತು ಲಕ್ಷ ಮೌಲ್ಯದ ಐದು ಚೆಕ್ಗಳನ್ನು ಭದ್ರತೆಯಾಗಿ ನೀಡಿದ್ದರು. ಆದರೆ ಚೆಕ್ಗಳನ್ನು ನಗದು ಮಾಡಿಕೊಳ್ಳಲು ಬ್ಯಾಂಕಿಗೆ ಸಲ್ಲಿಸಿದಾಗ ಏಳೂ ಚೆಕ್ಗಳು ಬೌನ್ಸ್ ಆಗಿವೆ. ಹಾಗಾಗಿ ಶರತ್ ಕುಮಾರ್, ರಾಧಿಕಾ ಹಾಗೂ ಲಿಸ್ಟಿನ್ ವಿರುದ್ಧ ಸಿನಿಮಾ ಫೋನ್ ಯಾನ್ ಸ್ ಸಂಸ್ಥೆಯಾದ ರ್ಯಾಡಿಯಂಟ್ ಮೀಡಿಯಾ ಸಂಸ್ಥೆ ದೂರು ದಾಖಲಿಸಿತ್ತು.
2015 ರಲ್ಲಿ ಶರತ್ ಕುಮಾರ್, ರಾಧಿಕಾ ಒಡೆತನದ 'ಮ್ಯಾಜಿಕ್ ಫ್ರೇಮ್ಸ್' ಸಂಸ್ಥೆಯಿಂದ 'ಇದು ಎನ್ನ ಮಾಯಂ' ಹೆಸರಿನ ತಮಿಳು ಸಿನಿಮಾ ನಿರ್ಮಾಣ ಮಾಡಲಾಗಿತ್ತು. ಸಿನಿಮಾವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ಸಿನಿಮಾದಲ್ಲಿ ಕೀರ್ತಿ ಸುರೇಶ್, ನಟ ವಿಕ್ರಂ ಪ್ರಭು, ಕನ್ನಡದ ನಟಿ ಕಾವ್ಯಾ ಶೆಟ್ಟಿ, ನಾಸರ್ ಅವರುಗಳು ನಟಿಸಿದ್ದರು. ಈ ಸಿನಿಮಾ ನಿರ್ಮಾಣಕ್ಕಾಗಿಯೇ ಶರತ್ ಕುಮಾರ್ ರ್ಯಾಡಿಯೆಂಟ್ ಸಂಸ್ಥೆಯಿಂದ 2 ಕೋಟಿ ಹಣ ಸಾಲ ಪಡೆದಿದ್ದರು.
The Special Court trying cases against MP and MLAs on Wednesday convicted actor couple Sarathkumar, Radhika and one other person in a 2018 cheque bounce case and sentenced them to one year's imprisonment. The court also imposed a penalty of Rs 5 crores in connection with the case.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm