ಬ್ರೇಕಿಂಗ್ ನ್ಯೂಸ್
09-04-21 03:42 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಪಾಸಿಟಿವ್ ವರದಿ ಬಂದ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವರ್ಷ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಘಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಸುದ್ದಿ ಜನ್ಯ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಶಾಕ್ ನೀಡಿತ್ತು. ಬಳಿಕ ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.
ಸಂಗೀತ ಕೆಲಸಗಳ ಜೊತೆಗೆ ಕಿರುತೆರೆಯಲ್ಲೂ ಬ್ಯುಸಿ ಇರುವ ಅರ್ಜುನ್ ಜನ್ಯ ಸದ್ಯ ಡಾನ್ಸ್ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾದ ಜೊತೆ ಮಾತನಾಡಿದ ಅರ್ಜುನ್ ಜನ್ಯ, 'ತಡವಾಗಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದೇನೆ' ಎಂದಿದ್ದಾರೆ.

ಸುರಕ್ಷತಾ ಪ್ರೋಟೋಕಾಲ್ ಅನುಸರಿಸಿದ್ದೇವೆ, ತುಂಬಾ ಜಾಗರೂಕರಾಗಿ ಇದ್ದರೂ ಸಹ ಹೇಗೆ ಕೊರೊನಾ ವೈರಸ್ ಬಂದಿದೆ ಎನ್ನುವುದು ಖಚಿತವಿಲ್ಲ ಎಂದಿದ್ದಾರೆ. ಶೀಘ್ರದಲ್ಲೇ ಚೇತರಿಸಿಕೊಂಡು ಮನೆಗೆ ಮರಳುತ್ತೇನೆ. ವೈದ್ಯರ ಸಲಹೆ ಮೇರೆಗೆ ಮತ್ತೆ ಕೆಲಸಕ್ಕೆ ತೆರಳುವುದಾಗಿ ಹೇಳಿದ್ದಾರೆ.
ಕನ್ನಡ ಚಿತ್ರರಂಗದ ಬಹು ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಸಾಕಷ್ಟು ಹಿಟ್ ಸಿನಿಮಾಗಳಿಗೆ ಹಿಟ್ ಹಾಡುಗಳನ್ನು ನೀಡಿದ್ದಾರೆ. ಇತ್ತೀಚಿಗೆ ರಿಲೀಸ್ ಆದ ದರ್ಶನ್ ನಟನೆಯ ಸೂಪರ್ ಹಿಟ್ ರಾಬರ್ಟ್ ಸಿನಿಮಾಗೂ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am