ಬ್ರೇಕಿಂಗ್ ನ್ಯೂಸ್
09-04-21 06:46 pm Source: FILMIBEAT ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಭಜರಂಗಿ-2' ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ತೆಲುಗು ಟಾಪ್ ಗಾಯಕ ಸಿದ್ ಶ್ರೀರಾಮ್ ದನಿಯಲ್ಲಿ ಮೂಡಿಬಂದಿರುವ ಮೇಲೋಡಿ ಹಾಡು ಸದ್ದು ಮಾಡ್ತಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ನೀಡಿರುವ ಈ ಹಾಡನ್ನು ತೆಲುಗಿನ ಸಿದ್ ಶ್ರೀರಾಮ್ ಹಾಡಲಿದ್ದಾರೆ ಎಂದಾಗಲೇ ಹಾಡಿನ ಮೇಲೆ ಹೆಚ್ಚು ನಿರೀಕ್ಷೆ ಹುಟ್ಟಿಕೊಂಡಿತ್ತು. ನಿರೀಕ್ಷೆಗೆ ತಕ್ಕಂತೆ ಹಾಡು ಇಂಪಾಗಿ ಮೂಡಿ ಬಂದಿದೆ.
ಸಿದ್ ಶ್ರೀರಾಮ್ ಹಾಡಿರುವ ಎರಡನೇ ಕನ್ನಡ ಹಾಡು ಇದು. ಇದಕ್ಕೂ ಮುಂಚೆ 'ಟಾಮ್ ಅಂಡ್ ಜೆರ್ರಿ' ಚಿತ್ರದಲ್ಲಿ ಹಾಡೊಂದಕ್ಕೆ ದನಿಯಾಗಿದ್ದಾರೆ. ಆ ಹಾಡು ಬಹಳ ಮೆಚ್ಚುಗೆ ಗಳಿಸಿಕೊಂಡಿದೆ.
ಅಲ್ಲು ಅರ್ಜುನ್ ಅಭಿನಯಿಸಿದ್ದ 'ಅಲಾ ವೈಕುಂಠಪುರಂಲೋ' ಚಿತ್ರದಲ್ಲಿ 'ಸಾಮಜವರಗಮನ' ಹಾಡು ಹಾಡಿದ್ದು ಇದೇ ಗಾಯಕ. ಗೀತಾ ಗೋವಿಂದಂ, ಟ್ಯಾಕ್ಸಿವಾಲಾ, 2.0, ಡಿಯರ್ ಕಾಮ್ರೆಡ್, ವಕೀಲ್ ಸಾಬ್, ರಂಗ್ದೇ, ತಮಿಳಿನಲ್ಲಿ ಮಾರ, ಸೈಕೋ, ಎನ್ಜಿಕೆ, ವಿಶ್ವಾಸಂ, ವಡಾ ಚೆನ್ನೈ, 2.0, ಮೆರ್ಸಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸಿದ್ ಶ್ರೀರಾಮ್ ಹಾಡಿದ್ದಾರೆ.
ಇನ್ನುಳಿದಂತೆ ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರವನ್ನು ಜಯಣ್ಣ-ಭೋಗೇಂದ್ರ ನಿರ್ಮಿಸಿದ್ದಾರೆ. ಭಾವನಾ ನಾಯಕಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಮೇ ತಿಂಗಳಲ್ಲಿ ರಿಲೀಸ್ ಆಗಬೇಕಿದೆ. ಕೊರೊನಾ ಕಾರಣದಿಂದ ಮತ್ತಷ್ಟು ವಿಳಂಬವಾದರೂ ಅಚ್ಚರಿ ಇಲ್ಲ.
This News Article IS A Copy OF FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm