ಬ್ರೇಕಿಂಗ್ ನ್ಯೂಸ್
10-04-21 06:57 pm Source: FILMIBEAT ಸಿನಿಮಾ
ಬಾಲಿವುಡ್ ನಟ ಅಜಯ್ ದೇವಗನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಮೇಡೇ' ಸಿನಿಮಾದ ಚಿತ್ರೀಕರಣ ಮುಂದೂಡಿಕೆಯಾಗಿದೆ. ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಿಗದಿಯಾಗಿದ್ದ ಶೂಟಿಂಗ್ ತಾತ್ಕಾಲಿಕವಾಗಿ ಮುಂದಕ್ಕೆ ಹಾಕಲಾಗಿದೆ. 2020ರ ಡಿಸೆಂಬರ್ ತಿಂಗಳಲ್ಲಿ ಸೆಟ್ಟೇರಿದ್ದ 'ಮೇಡೇ' ಸಿನಿಮಾ ಅದಾಗಲೇ ಕೆಲವು ದೃಶ್ಯಗಳ ಚಿತ್ರೀಕರಣ ಮಾಡಿದೆ. ಆದರೆ, ಕೋವಿಡ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿತ್ತು.
ಅಂದ್ಹಾಗೆ, ಏಪ್ರಿಲ್ ಕೊನೆಯಲ್ಲಿ ದೋಹಾದಲ್ಲಿ ಶೂಟಿಂಗ್ ಶುರು ಮಾಡಲು ಎಲ್ಲಾ ತಯಾರಿ ನಡೆದಿತ್ತು. ಈ ವೇಳೆ ಅಜಯ್ ದೇವಗನ್ ಜೊತೆ ಅಮಿತಾಭ್ ಬಚ್ಚನ್, ನಾಯಕಿ ನಟಿ ರಕುಲ್ ಪ್ರೀತ್ ಸಿಂಗ್ ಸಹ ಪಾಲ್ಗೊಳ್ಳಬೇಕಿತ್ತು.
ಸದ್ಯದ ಮಾಹಿತಿ ಪ್ರಕಾರ, ಮೇಡೇ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣ ಮುಗಿದಿದೆ. ದೋಹಾದಲ್ಲಿ ಮೂರು ದಿನಗಳ ಶೂಟಿಂಗ್ ಹಾಗೂ ಕತಾರ್ನಲ್ಲಿ ಕೊನೆಯ ಹಂತದ ಚಿತ್ರೀಕರಣದ ಬಳಿಕ ಸಿನಿಮಾ ಮುಗಿಸುವ ಯೋಜನೆಯಲ್ಲಿದ್ದರು. ನಿರ್ದೇಶಕ ಅಜಯ್ ದೇವಗನ್ ಕಡಿಮೆ ಸಿಬ್ಬಂದಿ ಜೊತೆ ಕತಾರ್ಗೆ ತೆರಳಿ ಕೊನೆಯ ಚಿತ್ರೀಕರಣ ಮಾಡಲು ನಿರ್ಧರಿಸಿದ್ದರು. ಆದ್ರೀಗ, ಆ ಯೋಜನೆಗೆ ಕೊರೊನಾ ಅಡ್ಡಿಯಾಗಿದೆ. ಈ ಹಿಂದೆ ಅಮಿತಾಭ್ ಬಚ್ಚನ್ ಮತ್ತು ರಕುಲ್ ಪ್ರೀತ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ತಗುಲಿತ್ತು.
ಆ ಸಂದರ್ಭದಲ್ಲಿ ಬಿಗ್ ಬಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಂಡಿದ್ದರು. ರಕುಲ್ ತಮ್ಮ ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದರು. ಒಂದು ವಾರದ ವಿಶ್ರಾಂತಿ ಬಳಿಕ ನೆಗೆಟಿವ್ ಫಲಿತಾಂಶ ಬಂದಿತ್ತು.
ಅಂದ್ಹಾಗೆ, ಮೇಡೇ ಸಿನಿಮಾ ನೈಜ ಘಟನೆಗಳ ಆಧರಿಸಿ ಸಿದ್ದವಾಗುತ್ತಿರುವ ಚಿತ್ರ. 2015ರಲ್ಲಿ ನಡೆದ ಕೆಲವು ಘಟನೆಗಳನ್ನು ಚಿತ್ರಕಥೆ ಮಾಡಿ ಸಿನಿಮಾ ರೂಪ ನೀಡಲಾಗುತ್ತಿದೆ. ದೋಹಾ ಮತ್ತು ಕೊಚ್ಚಿ ವಿಮಾನದ ಸಂಘರ್ಷದ ವೇಳೆ ನಡೆದ ಘಟನೆಯ ಸುತ್ತಮುತ್ತಾ ಕಥೆ ಮಾಡಲಾಗಿದೆ.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm