ಬ್ರೇಕಿಂಗ್ ನ್ಯೂಸ್
13-04-21 07:29 pm Source: FILMIBEAT ಸಿನಿಮಾ
ಏಳು ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ಕನ್ನಡ ಸಿನಿಮಾ 'ದೃಶ್ಯ'ದ ಮುಂದುವರೆದ ಭಾಗ ನಿರ್ಮಾಣವಾಗುವುದು ಖಾತ್ರಿಯಾಗಿದೆ. ರವಿಚಂದ್ರನ್, ನವ್ಯಾ ನಾಯರ್, ಅಚ್ಯುತ್ ಕುಮಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ 'ದೃಶ್ಯ' ಸಿನಿಮಾ ಭರ್ಜರಿ ಹಿಟ್ ಆಗಿತ್ತು. ಮಲಯಾಳಂನ 'ದೃಶ್ಯಂ' ಸಿನಿಮಾದ ರೀಮೇಕ್ ಆಗಿದ್ದ ಈ ಸಿನಿಮಾದ ಮುಂದುವರೆದ ಭಾಗ 'ದೃಶ್ಯ 2' ಕನ್ನಡದಲ್ಲಿ ನಿರ್ಮಾಣವಾಗಲಿದೆ. ರವಿಚಂದ್ರನ್ ಅವರು ಮತ್ತೆ 'ರಾಜೇಂದ್ರ ಪೊನ್ನಪ್ಪ'ನ ಪಾತ್ರದಲ್ಲಿ ಮಿಂಚಲಿದ್ದಾರೆ.
ಮಲಯಾಳಂನಲ್ಲಿ 'ದೃಶ್ಯಂ' ಸಿನಿಮಾ ಮಾಡಿದ್ದ ತಂಡವೇ 'ದೃಶ್ಯಂ2' ಸಿನಿಮಾ ನಿರ್ಮಾಣ ಮಾಡಿ ಇತ್ತೀಚೆಗಷ್ಟೆ ಒಟಿಟಿಯಲ್ಲಿ ಬಿಡುಗಡೆ ಮಾಡಿತ್ತು. ಸಿನಿಮಾ ಮತ್ತೆ ಹಿಟ್ ಆಗಿದೆ. ಹಾಗಾಗಿ ಅದೇ ಸಿನಿಮಾವನ್ನು ಕನ್ನಡದಲ್ಲಿ ಮತ್ತೆ ರೀಮೇಕ್ ಮಾಡಲಾಗುತ್ತಿದೆ.
2014 ರಲ್ಲಿ ಕನ್ನಡದ 'ದೃಶ್ಯ' ನಿರ್ದೇಶಿಸಿದ್ದ ಪಿ.ವಾಸು ಅವರೇ 'ದೃಶ್ಯ 2' ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. 'ದೃಶ್ಯ' ಸಿನಿಮಾದಲ್ಲಿದ್ದ ಬಹುತೇಕ ಪಾತ್ರಗಳು, ನಟರು 'ದೃಶ್ಯ 2' ಸಿನಿಮಾದಲ್ಲಿಯೂ ಮುಂದುವರೆಯಲಿದ್ದಾರೆ. ಹೆಚ್ಚುವರಿ ಪಾತ್ರಗಳು ಸಹ ಸೇರಿಕೊಳ್ಳಲಿವೆ. ಸಿನಿಮಾವನ್ನು ಈ4 ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣ ಮಾಡಲಿದೆ.
ಮಲಯಾಳಂನಲ್ಲಿ ಇತ್ತೀಚೆಗಷ್ಟೆ ಬಿಡುಗಡೆ ಆಗಿರುವ 'ದೃಶ್ಯ 2' ಸಿನಿಮಾವು ಈಗಾಗಲೇ ತೆಲುಗಿನಲ್ಲಿ ರೀಮೇಕ್ ಆಗುತ್ತಿದೆ. ಮೂಲ ಸಿನಿಮಾ ನಿರ್ದೇಶಿಸಿದ್ದ ಜೀತು ಜೋಸೆಫ್ ಅವರೇ ತೆಲುಗಿನಲ್ಲಿಯೂ ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಹಾಗೂ ಹಿಂದಿಯಲ್ಲಿಯೂ ಈ ಸಿನಿಮಾ ರೀಮೇಕ್ ಆಗುವ ಸಾಧ್ಯತೆ ಇದೆ. ಜೀತು ಜೋಸೆಫ್ ನಿರ್ದೇಶಿಸಿದ್ದ ಮಲಯಾಳಂನ ಮೊದಲ 'ದೃಶ್ಯಂ' ಸಿನಿಮಾವು ಕನ್ನಡ, ತೆ
'ದೃಶ್ಯ' ಸಿನಿಮಾದಲ್ಲಿ ಆಗಿದ್ದ ಕೊಲೆಯ ತನಿಖೆಯೇ 'ದೃಶ್ಯ 2' ನಲ್ಲಿಯೂ ಮುಂದುವರೆಯಲಿದೆ. ರಾಜೇಂದ್ರ ಪೊನ್ನಪ್ಪ ತನ್ನ ಬುದ್ಧಿವಂತಿಕೆಯಿಂದ ಕೊಲೆ ಪ್ರಕರಣದಿಂದ ತನ್ನ ಕುಟುಂಬವನ್ನು ಕಾಪಾಡಿಕೊಂಡಿದ್ದ ಆದರೆ 'ದೃಶ್ಯ 2' ನಲ್ಲಿ ಅದೇ ಪ್ರಕರಣವನ್ನು ಮತ್ತೆ ಹೇಗೆ ನಿಭಾಯಿಸುತ್ತಾನೆ ಮತ್ತೆ ಹೇಗೆ ತನ್ನ ಕುಟುಂಬವನ್ನು ಕಾಪಾಡಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆಯಾಗಿರಲಿದೆ.
This News Article Is A Copy Of FILMIBEAT
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm