ಬ್ರೇಕಿಂಗ್ ನ್ಯೂಸ್
15-04-21 07:01 pm Source: FILMIBEAT ಸಿನಿಮಾ
ಕೆಜಿಎಫ್' ಸಿನಿಮಾದಲ್ಲಿ ಅಮ್ಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟಿ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ತಯಾರಾಗಿದ್ದಾರೆ. 'ಮುಂಗಾರುಮಳೆ' ಹಾಗೂ 'ಮೊಗ್ಗಿನ ಮನಸು' ಸಿನಿಮಾಗಳಲ್ಲಿ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದ ಜಿ.ಗಂಗಾಧರ್ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಇ.ಕೆ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಳ್ಳುತ್ತಿದೆ.
'ಮುಂಗಾರುಮಳೆ 2' ಚಿತ್ರದಲ್ಲಿ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ಅವರು ಸಿನಿಮಾವನ್ನು ನಿರ್ದೇಶನ ಮಾಡಿದ್ದು ಸಿನಿಮಾ ಸದ್ದಿಲ್ಲದೆ ಶೂಟಿಂಗ್ ಕೂಡ ಪೂರ್ಣಗೊಳಿಸಿದೆ. ಇನ್ನೇನು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಸಿನಿಮಾದ ಶೀರ್ಷಿಕೆಯನ್ನು ನಟ ರಿಷಿ ಬುಧವಾರ ಬಿಡುಗಡೆಗೊಳಿಸಿದ್ದಾರೆ.
ಶೀರ್ಷಿಕೆಯ ಕುರಿತ 40 ಸೆಕೆಂಡ್ ವಿಡಿಯೊವೊಂದನ್ನು ಚಿತ್ರತಂಡ ಯೂಟ್ಯೂಬ್ನಲ್ಲಿ ಹಂಚಿಕೊಂಡಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಆಗಿರುವುದರಿಂದ ಪಾತ್ರಗಳ ಬಗ್ಗೆ ಹೆಚ್ಚಿನ ಗುಟ್ಟು ಬಿಟ್ಟುಕೊಟ್ಟಿಲ್ಲ ಚಿತ್ರತಂಡ. "ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ.
ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ನೋಡಲು ಸಿಗಲಿವೆ. ಚಿತ್ರದ ಒಂದೊಂದು ದೃಶ್ಯವನ್ನೂ ಬಹಳ ಕಾಳಜಿ ಹಾಗೂ ಸಂಯಮದಿಂದ ಚಿತ್ರೀಕರಿಸಲಾಗಿದೆ. ಆದ್ದರಿಂದ ಶೂಟಿಂಗ್ ಮುಗಿಯುವವರೆಗೂ ನಾವು ಸಿನಿಮಾ ಕುರಿತು ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಥ್ರಿಲ್ಲರ್ ಚಿತ್ರಗಳ ಸಾಲಿನಲ್ಲಿ ನಮ್ಮ ಸಿನಿಮಾ ಉದಾಹರಣೆಯಾಗಿ ನಿಲ್ಲುವ ನಂಬಿಕೆ ನಮ್ಮ ತಂಡಕ್ಕಿದೆ' ಎಂದು ನಿರ್ದೇಶಕ ಪ್ರಶಾಂತ್ ಚಂದ್ರ ಹೇಳಿದ್ದಾರೆ.
'''#ಮ್ಯೂಟ್' ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಲು ಖುಷಿಯಾಗುತ್ತಿದೆ. ಇದರಲ್ಲಿ ಅದ್ಬುತ ನಟರು ಅಭಿನಯಿಸಿದ್ದಾರೆ. ಪ್ರತಿಭಾವಂತ ಪ್ರಶಾಂತ್ ಚಂದ್ರ ಅವರ ನಿರ್ದೇಶನದ ಈ ಸಿನಿಮಾಗೆ ಯಶಸ್ಸು ಸಿಗಲಿ'' ಎಂದು ನಟ ರಿಷಿ ತಂಡಕ್ಕೆ ಹಾರೈಸಿದ್ದಾರೆ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm