ಬ್ರೇಕಿಂಗ್ ನ್ಯೂಸ್
15-04-21 07:01 pm Source: FILMIBEAT ಸಿನಿಮಾ
ಕೆಜಿಎಫ್' ಸಿನಿಮಾದಲ್ಲಿ ಅಮ್ಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟಿ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ತಯಾರಾಗಿದ್ದಾರೆ. 'ಮುಂಗಾರುಮಳೆ' ಹಾಗೂ 'ಮೊಗ್ಗಿನ ಮನಸು' ಸಿನಿಮಾಗಳಲ್ಲಿ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದ ಜಿ.ಗಂಗಾಧರ್ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಇ.ಕೆ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಳ್ಳುತ್ತಿದೆ.
'ಮುಂಗಾರುಮಳೆ 2' ಚಿತ್ರದಲ್ಲಿ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ಅವರು ಸಿನಿಮಾವನ್ನು ನಿರ್ದೇಶನ ಮಾಡಿದ್ದು ಸಿನಿಮಾ ಸದ್ದಿಲ್ಲದೆ ಶೂಟಿಂಗ್ ಕೂಡ ಪೂರ್ಣಗೊಳಿಸಿದೆ. ಇನ್ನೇನು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಸಿನಿಮಾದ ಶೀರ್ಷಿಕೆಯನ್ನು ನಟ ರಿಷಿ ಬುಧವಾರ ಬಿಡುಗಡೆಗೊಳಿಸಿದ್ದಾರೆ.
ಶೀರ್ಷಿಕೆಯ ಕುರಿತ 40 ಸೆಕೆಂಡ್ ವಿಡಿಯೊವೊಂದನ್ನು ಚಿತ್ರತಂಡ ಯೂಟ್ಯೂಬ್ನಲ್ಲಿ ಹಂಚಿಕೊಂಡಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಆಗಿರುವುದರಿಂದ ಪಾತ್ರಗಳ ಬಗ್ಗೆ ಹೆಚ್ಚಿನ ಗುಟ್ಟು ಬಿಟ್ಟುಕೊಟ್ಟಿಲ್ಲ ಚಿತ್ರತಂಡ. "ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ.
ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ನೋಡಲು ಸಿಗಲಿವೆ. ಚಿತ್ರದ ಒಂದೊಂದು ದೃಶ್ಯವನ್ನೂ ಬಹಳ ಕಾಳಜಿ ಹಾಗೂ ಸಂಯಮದಿಂದ ಚಿತ್ರೀಕರಿಸಲಾಗಿದೆ. ಆದ್ದರಿಂದ ಶೂಟಿಂಗ್ ಮುಗಿಯುವವರೆಗೂ ನಾವು ಸಿನಿಮಾ ಕುರಿತು ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಥ್ರಿಲ್ಲರ್ ಚಿತ್ರಗಳ ಸಾಲಿನಲ್ಲಿ ನಮ್ಮ ಸಿನಿಮಾ ಉದಾಹರಣೆಯಾಗಿ ನಿಲ್ಲುವ ನಂಬಿಕೆ ನಮ್ಮ ತಂಡಕ್ಕಿದೆ' ಎಂದು ನಿರ್ದೇಶಕ ಪ್ರಶಾಂತ್ ಚಂದ್ರ ಹೇಳಿದ್ದಾರೆ.
'''#ಮ್ಯೂಟ್' ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಲು ಖುಷಿಯಾಗುತ್ತಿದೆ. ಇದರಲ್ಲಿ ಅದ್ಬುತ ನಟರು ಅಭಿನಯಿಸಿದ್ದಾರೆ. ಪ್ರತಿಭಾವಂತ ಪ್ರಶಾಂತ್ ಚಂದ್ರ ಅವರ ನಿರ್ದೇಶನದ ಈ ಸಿನಿಮಾಗೆ ಯಶಸ್ಸು ಸಿಗಲಿ'' ಎಂದು ನಟ ರಿಷಿ ತಂಡಕ್ಕೆ ಹಾರೈಸಿದ್ದಾರೆ.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm