ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm