ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm