ಬ್ರೇಕಿಂಗ್ ನ್ಯೂಸ್
16-04-21 04:26 pm Headline Karnataka News Network ಸಿನಿಮಾ
ಚೆನ್ನೈ,ಎ.17: ಕಾಲಿವುಡ್ನ ಖ್ಯಾತ ನಟ ವಿವೇಕ್ ಅವರಿಗೆ ಶುಕ್ರವಾರ (ಏ.16) ಹೃದಯಾಘಾತ ಸಂಭವಿಸಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕ್ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ. ಶುಕ್ರವಾರ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಮತ್ತು ಆಂಜಿಯೋಗ್ರಾಮ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

59 ವರ್ಷ ವಯಸ್ಸಿನ ವಿವೇಕ್ ಅವರು ಗುರುವಾರವಷ್ಟೇ ಕೊರೊನಾ ವೈರಸ್ ಲಸಿಕೆ ಪಡೆದುಕೊಂಡಿದ್ದರು. ಕಾಕತಾಳೀಯ ಎಂಬಂತೆ ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊರೊನಾ ವ್ಯಾಕ್ಸಿನ್ ಪಡೆದುಕೊಂಡಿದ್ದಕ್ಕೂ, ಹೃದಯಾಘಾತ ಆಗಿರುವುದಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂಬ ಬಗ್ಗೆ ಯಾರೂ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.
ಗುರುವಾರ ವಾಕ್ಸಿನ್ ಪಡೆದುಕೊಂಡ ನಂತರ ಮಾಧ್ಯಮಗಳ ಜೊತೆ ವಿವೇಕ್ ಮಾತನಾಡಿದ್ದರು. ‘ಮಾಸ್ಕ್ ಧರಿಸುವುದು, ಕೈ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಸುರಕ್ಷಿತವಾಗಿರಬಹುದು. ವೈದ್ಯಕೀಯವಾಗಿ ರಕ್ಷಿಸಿಕೊಳ್ಳಲು ವ್ಯಾಕ್ಸಿನ್ ಪಡೆಯಬೇಕು. ನೀವು ಆಯುರ್ವೇದ ಮುಂತಾದ ಚಿಕಿತ್ಸೆ ಪಡೆಯುತ್ತಿದ್ದರೂ ಒಳ್ಳೆಯದು. ಅವೆಲ್ಲವೂ ಹೆಚ್ಚುವರಿ ಕ್ರಮಗಳು. ನಮ್ಮ ಜೀವ ಉಳಿಸುವುದು ವ್ಯಾಕ್ಸಿನ್ ಮಾತ್ರ’ ಎಂದು ವಿವೇಕ್ ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿರುವ ವಿವೇಕ್ ಅವರು ಟ್ವಿಟರ್ ಮೂಲಕ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿರುವುದು ಶಾಕಿಂಗ್ ಸಂಗತಿ. ಬಾಲಿವುಡ್ನ ‘ವಿಕ್ಕಿ ಡೋನರ್’ ಚಿತ್ರದ ತಮಿಳು ರಿಮೇಕ್ ಆದಂತಹ ‘ಧಾರಾಳ ಪ್ರಭು’ ಚಿತ್ರದಲ್ಲಿ ವಿವೇಕ್ ಕೊನೇ ಬಾರಿಗೆ ನಟಿಸಿದ್ದರು.
ಕಳೆದ ವರ್ಷ ಲಾಕ್ ಡೌನ್ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಧಾರಾಳ ಪ್ರಭು ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಲಾಕ್ಡೌನ್ನಿಂದಾಗಿ ಚಿತ್ರಕ್ಕೆ ಹೊಡೆದ ಬಿತ್ತು. ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ‘ಇಂಡಿಯನ್ 2’ ಸಿನಿಮಾದಲ್ಲೂ ವಿವೇಕ್ ನಟಿಸುತ್ತಿದ್ದರು. ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
In a shocking turn of events, popular Tamil actor and comedian Vivek have been admitted to the intensive care unit of a private hospital in Chennai after he suffered a heart attack on Friday morning. According to the news reports, his condition is said to be critical.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm