ಬ್ರೇಕಿಂಗ್ ನ್ಯೂಸ್
18-04-21 11:33 am Mangaluru Correspondent ಸಿನಿಮಾ
ಮಂಗಳೂರು, ಎ.18: ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಿರ್ದೇಶಕರಾಗಿ ಹೆಸರು ಮಾಡಿದ್ದ ರಘು ಶೆಟ್ಟಿ (39) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಘು ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.
ರಘು ಶೆಟ್ಟಿ ಮೂಲತಃ ಮೂಡುಬಿದ್ರೆಯವರು. ಅವರ ತಂದೆ ಹುಬ್ಬಳ್ಳಿಯಲ್ಲಿ ಬಿಸಿನೆಸ್ ಹೊಂದಿದ್ದರಿಂದ ಪ್ರಾಥಮಿಕ ಶಿಕ್ಷಣವನ್ನು ಅಲ್ಲಿಯೇ ಪೂರೈಸಿದ್ದರು. ಬಳಿಕ ಮೂಡುಬಿದ್ರೆಯ ಮಹಾವೀರ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದರು. ಯುವಕನಾಗಿದ್ದಾಗಲೇ ಫಿಲ್ಮ್ ಬಗ್ಗೆ ಆಸಕ್ತಿ ಹೊಂದಿದ್ದಲ್ಲದೆ ಬೆಂಗಳೂರಿನಲ್ಲಿದ್ದುಕೊಂಡು ಕನ್ನಡ ಚಿತ್ರರಂಗದಲ್ಲಿ ನೆಲೆಯೂರಿದ್ದರು. ಸ್ವಂತ ನಿರ್ದೇಶನದಲ್ಲಿ ಮೊದಲಿಗೆ ತುಳು ಚಿತ್ರವನ್ನು ತಯಾರಿಸಿದ್ದರು.
ತಮ್ಮ ಮೊದಲ ಸಿನಿಮಾ ‘ಅರ್ಜುನ್ ವೆಡ್ಸ್ ಅಮೃತಾ’ ಮೂಲಕ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದ ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ನೆಲೆಯೂರಲು ಆಸಕ್ತಿ ತೋರಿದ್ದರು. ಫ್ಯಾಮಿಲಿ ಹಿಟ್ ಸಿನಿಮಾವಾಗಿ ಗಮನ ಸೆಳೆದಿದ್ದ ಅರ್ಜುನ್ ವೆಡ್ಸ್ ಅಮೃತಾ ಸಿನಿಮಾದ ನಿರ್ದೇಶನಕ್ಕಾಗಿ ರಘು ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯೂ ಲಭಿಸಿತ್ತು.

ಈ ಹಿಂದೆ ಉದಯ ಟಿವಿ ಸೇರಿದಂತೆ ಹಲವು ಸುದ್ದಿ ವಾಹಿನಿಗಳಲ್ಲಿ ಉದ್ಯೋಗದಲ್ಲಿದ್ದ ರಘು ಶೆಟ್ಟಿ ಸುದ್ದಿ ವಾಹಿನಿಗಳು ಎರಡು ಮೂರು ವರ್ಷಗಳ ಹಿಂದೆ ತೀವ್ರ ಸಂಚಲನಕ್ಕೀಡಾದ ಬಳಿಕ ತುಳು ಸಿನಿಮಾದತ್ತ ಆಸಕ್ತಿ ಬೆಳೆಸಿದ್ದರು. ಈ ನಡುವೆ ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮವನ್ನೂ ನಡೆಸಿದ್ದರು. ಅರ್ಜುನ್ ವೆಡ್ಸ್ ಚಿತ್ರ ಹಿಟ್ ಆಗಿದ್ದರಿಂದ ಕನ್ನಡ ಸಿನಿಮಾ ನಿರ್ದೇಶನಕ್ಕೂ ಕೈಹಾಕಿದ್ದರು. ನಟ ಕೋಮಲ್ ಜೊತೆ ಕನ್ನಡ ಸಿನಿಮಾ ತಯಾರಿಯಲ್ಲಿದ್ದ ರಘು ಶೆಟ್ಟಿ, ಇನ್ನೇನು ಸಿನಿಮಾ ಚಿತ್ರೀಕರಣ ನಡೆಸುವವರಿದ್ದರು. ಆದರೆ, ಅಷ್ಟರಲ್ಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ತುಳು ಸಿನಿಮಾ ರಂಗದಲ್ಲಿ ಹೆಜ್ಜೆ ಇಡುತ್ತಿದ್ದಾಗಲೇ ಇನ್ನಿಲ್ಲವಾದ ರಘು ಶೆಟ್ಟಿಯವರ ನಿಧನದ ತುಳು ಸಿನಿಮಾ ರಂಗದ ಕಲಾವಿದರು ಶೋಕ ವ್ಯಕ್ತಪಡಿಸಿದ್ದಾರೆ.
Renowned Tulu cinema director Raghu Shetty succumbed to heart attack on Saturday April 17 evening. He was 42.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm