ಬ್ರೇಕಿಂಗ್ ನ್ಯೂಸ್
19-04-21 01:37 pm Headline Karnataka News Network ಸಿನಿಮಾ
ಬೆಂಗಳೂರು,ಎ.19: ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಈ ವಿಚಾರವನ್ನು ಖಚಿತಪಡಿಸಿರುವ ಅವರು, ಅನೇಕರ ವಿರುದ್ಧ ಹರಿಹಾಯ್ದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ. ರಾಘವೇಂದ್ರ, ಆರೋಗ್ಯ ಸಚಿವ ಸುಧಾಕರ್, ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಒಂದು ವೇಳೆ ತಾವು ನಿಧನರಾದರೆ ಅದಕ್ಕೆ ಯಡಿಯೂರಪ್ಪ, ರಾಘವೇಂದ್ರ, ಸುಧಾಕರ್ ಮುಂತಾದ ರಾಜಕಾರಣಿಗಳೇ ಕಾರಣ ಎಂದು ಗುರು ಪ್ರಸಾದ್ ಹೇಳಿದ್ದಾರೆ.


ಕೊನೇ ಕ್ಷಣಗಳ ಕೊನೇ ಮಾತುಗಳು. ಕೊರೊನಾ ಪಾಸಿಟಿವ್ ಬಂದಿದೆ. ನಮ್ಮ ಮನೆಯವರೆಗೂ ಕೊರೊನಾ ತಂದುಕೊಟ್ಟಂತಹ ಯಡಿಯೂರಪ್ಪ, ವಿಜಯೇಂದ್ರ ಇವರಿಗೆಲ್ಲ ಧನ್ಯವಾದಗಳು. ನಮ್ಮ ಸಾವಿಗೆ ಮುನ್ನುಡಿ ಬರೆದಿದ್ದೀರಿ. ಕೊರೊನಾ ಪಾಸಿಟಿವ್ ಆಗಿದ್ದಕ್ಕೆ ನೋವಿನಲ್ಲಿ ಮಾತನಾಡುತ್ತಿದ್ದೇನೆ. ನಾನು ಸತ್ತರೂ ಕೂಡ ಕೊನೇ ಕ್ಷಣದವರೆಗೂ ನನ್ನ ಈ ಶಾಪ ನೋವು ಕೊಡಬೇಕು ಎಂದು ಈ ಮಾತು ಹೇಳುತ್ತಿದ್ದೇನೆ. ಒಂದೂವರೆ ವರ್ಷ ಟೈಮ್ ತಗೊಂಡು, ಮೂರು-ನಾಲ್ಕು ತಿಂಗಳು ಲಾಕ್ಡೌನ್ ಮಾಡಿದ್ರಲ್ಲ’ ಎನ್ನುವ ಮೂಲಕ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದಿದ್ದಾರೆ ಗುರುಪ್ರಸಾದ್.

ಮೋದಿ ಪ್ರಾಮಾಣಿಕ. ಆದರೆ ಬಿಜಿಪಿಯವರೆಲ್ಲ ಪ್ರಾಮಾಣಿಕರಲ್ಲ. ಜೆಡಿಎಸ್, ಕಾಂಗ್ರೆಸ್ನವರೆಲ್ಲ ಪ್ರಾಮಾಣಿಕರಲ್ಲ. ಒಂದು ವೈರಸ್ ನಿಮ್ಮನ್ನು ಆಡಿಸುತ್ತಿದೆ. ವಿಜ್ಞಾನದ ಹಿನ್ನೆಲೆ ಇದ್ದರೆ ಡಾ. ಸುಧಾಕರ್ ಬೆಂಗಳೂರಿನಲ್ಲಿ ಒಂದು ಲಕ್ಷ ವಾರ್ಫೇರ್ ಟೆಂಟ್ ಹಾಕಿಸಿ. ಅದರ ಬದಲು ಯಾವುದೇ ಬ್ಯುಸಿನೆಸ್ ನಿಲ್ಲಿಸ ಬೇಡಿ. ಒಂದೊಂದು ರೂಪಾಯಿ ದುಡಿಯಲು ಎಲ್ಲರೂ ಕಷ್ಟ ಪಡುತ್ತಿದ್ದಾರೆ. ಒಂದೂವರೆ ವರ್ಷ ಸಮಯ ತೆಗೆದುಕೊಂಡು ಪ್ರತಿಮನೆಗೂ ವೈರಸ್ ಕಳಿಸಿದ್ದೀರಲ್ಲ.. ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು. ನನಗೆ ಕೊರೊನಾ ಬಂದಿದೆ. ಅಕಸ್ಮಾತ್ ಸತ್ತು ಹೋದರೆ ಇದನ್ನೆಲ್ಲ ಹೇಳೋಕೆ ಆಗಲ್ಲ’ ಎಂದು ಗುರುಪ್ರಸಾದ್ ಹೇಳಿದ್ದಾರೆ.
ಚಿತ್ರರಂಗದ ಅನೇಕ ಜನರನ್ನು ಸಾಯಿಸಿದ್ದೀರಿ. ನಾನು ಕೂಡ ಹಾರ್ಟ್ ಅಟ್ಯಾಕ್ ಆಗಿ ಸಾಯಬಹುದು. ಮನೆಮನೆಗೂ ವೈರಸ್ ಬಂದಿದೆ. ಸಿನಿಮಾ ಪ್ರಚಾರಕ್ಕಾಗಿ ಇದನ್ನೆಲ್ಲ ನಾನು ಮಾಡುತ್ತಿಲ್ಲ. ನಾನು ಬದುಕಿದ್ದರೆ ತಾನೇ ಅದೆಲ್ಲ. ಪ್ರತಿಯೊಬ್ಬರು ಬದುಕುವುದು ಕೂಡ ಮುಖ್ಯ. ಕರ್ನಾಟಕದಲ್ಲಿ ಕೊರೊನಾದಿಂದಾದ ಪ್ರತಿ ಸಾವಿಗೆ ಡಾ. ಸುಧಾಕರ್ ಕಾರಣ. ಡಿ.ಕೆ. ಶಿವಕುಮಾರ್. ಎಚ್.ಡಿ. ಕುಮಾರಸ್ವಾಮಿ ಸಾಚಾ ಎಂದು ನಾನು ಹೇಳುತ್ತಿಲ್ಲ. ಎಲ್ಲರೂ ನಮ್ಮನ್ನು ಕೊಲ್ಲುತ್ತಿದ್ದೀರಿ. ಇದು ನನ್ನ ಡೆತ್ ನೋಟ್. ನನ್ನ ಸಾವಿಗೆ ನೀವೆಲ್ಲರೂ ಕಾರಣ’ ಎಂದು ಗುರುಪ್ರಸಾದ್ ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ.
Director Guruprasad mata tested covid positive. Alleges Karnataka ministers CM and Dr Sudhakar will be responsible for my death on Facebook live video.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm