ಬ್ರೇಕಿಂಗ್ ನ್ಯೂಸ್
19-04-21 01:37 pm Headline Karnataka News Network ಸಿನಿಮಾ
ಬೆಂಗಳೂರು,ಎ.19: ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಈ ವಿಚಾರವನ್ನು ಖಚಿತಪಡಿಸಿರುವ ಅವರು, ಅನೇಕರ ವಿರುದ್ಧ ಹರಿಹಾಯ್ದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ. ರಾಘವೇಂದ್ರ, ಆರೋಗ್ಯ ಸಚಿವ ಸುಧಾಕರ್, ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಒಂದು ವೇಳೆ ತಾವು ನಿಧನರಾದರೆ ಅದಕ್ಕೆ ಯಡಿಯೂರಪ್ಪ, ರಾಘವೇಂದ್ರ, ಸುಧಾಕರ್ ಮುಂತಾದ ರಾಜಕಾರಣಿಗಳೇ ಕಾರಣ ಎಂದು ಗುರು ಪ್ರಸಾದ್ ಹೇಳಿದ್ದಾರೆ.


ಕೊನೇ ಕ್ಷಣಗಳ ಕೊನೇ ಮಾತುಗಳು. ಕೊರೊನಾ ಪಾಸಿಟಿವ್ ಬಂದಿದೆ. ನಮ್ಮ ಮನೆಯವರೆಗೂ ಕೊರೊನಾ ತಂದುಕೊಟ್ಟಂತಹ ಯಡಿಯೂರಪ್ಪ, ವಿಜಯೇಂದ್ರ ಇವರಿಗೆಲ್ಲ ಧನ್ಯವಾದಗಳು. ನಮ್ಮ ಸಾವಿಗೆ ಮುನ್ನುಡಿ ಬರೆದಿದ್ದೀರಿ. ಕೊರೊನಾ ಪಾಸಿಟಿವ್ ಆಗಿದ್ದಕ್ಕೆ ನೋವಿನಲ್ಲಿ ಮಾತನಾಡುತ್ತಿದ್ದೇನೆ. ನಾನು ಸತ್ತರೂ ಕೂಡ ಕೊನೇ ಕ್ಷಣದವರೆಗೂ ನನ್ನ ಈ ಶಾಪ ನೋವು ಕೊಡಬೇಕು ಎಂದು ಈ ಮಾತು ಹೇಳುತ್ತಿದ್ದೇನೆ. ಒಂದೂವರೆ ವರ್ಷ ಟೈಮ್ ತಗೊಂಡು, ಮೂರು-ನಾಲ್ಕು ತಿಂಗಳು ಲಾಕ್ಡೌನ್ ಮಾಡಿದ್ರಲ್ಲ’ ಎನ್ನುವ ಮೂಲಕ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದಿದ್ದಾರೆ ಗುರುಪ್ರಸಾದ್.

ಮೋದಿ ಪ್ರಾಮಾಣಿಕ. ಆದರೆ ಬಿಜಿಪಿಯವರೆಲ್ಲ ಪ್ರಾಮಾಣಿಕರಲ್ಲ. ಜೆಡಿಎಸ್, ಕಾಂಗ್ರೆಸ್ನವರೆಲ್ಲ ಪ್ರಾಮಾಣಿಕರಲ್ಲ. ಒಂದು ವೈರಸ್ ನಿಮ್ಮನ್ನು ಆಡಿಸುತ್ತಿದೆ. ವಿಜ್ಞಾನದ ಹಿನ್ನೆಲೆ ಇದ್ದರೆ ಡಾ. ಸುಧಾಕರ್ ಬೆಂಗಳೂರಿನಲ್ಲಿ ಒಂದು ಲಕ್ಷ ವಾರ್ಫೇರ್ ಟೆಂಟ್ ಹಾಕಿಸಿ. ಅದರ ಬದಲು ಯಾವುದೇ ಬ್ಯುಸಿನೆಸ್ ನಿಲ್ಲಿಸ ಬೇಡಿ. ಒಂದೊಂದು ರೂಪಾಯಿ ದುಡಿಯಲು ಎಲ್ಲರೂ ಕಷ್ಟ ಪಡುತ್ತಿದ್ದಾರೆ. ಒಂದೂವರೆ ವರ್ಷ ಸಮಯ ತೆಗೆದುಕೊಂಡು ಪ್ರತಿಮನೆಗೂ ವೈರಸ್ ಕಳಿಸಿದ್ದೀರಲ್ಲ.. ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು. ನನಗೆ ಕೊರೊನಾ ಬಂದಿದೆ. ಅಕಸ್ಮಾತ್ ಸತ್ತು ಹೋದರೆ ಇದನ್ನೆಲ್ಲ ಹೇಳೋಕೆ ಆಗಲ್ಲ’ ಎಂದು ಗುರುಪ್ರಸಾದ್ ಹೇಳಿದ್ದಾರೆ.
ಚಿತ್ರರಂಗದ ಅನೇಕ ಜನರನ್ನು ಸಾಯಿಸಿದ್ದೀರಿ. ನಾನು ಕೂಡ ಹಾರ್ಟ್ ಅಟ್ಯಾಕ್ ಆಗಿ ಸಾಯಬಹುದು. ಮನೆಮನೆಗೂ ವೈರಸ್ ಬಂದಿದೆ. ಸಿನಿಮಾ ಪ್ರಚಾರಕ್ಕಾಗಿ ಇದನ್ನೆಲ್ಲ ನಾನು ಮಾಡುತ್ತಿಲ್ಲ. ನಾನು ಬದುಕಿದ್ದರೆ ತಾನೇ ಅದೆಲ್ಲ. ಪ್ರತಿಯೊಬ್ಬರು ಬದುಕುವುದು ಕೂಡ ಮುಖ್ಯ. ಕರ್ನಾಟಕದಲ್ಲಿ ಕೊರೊನಾದಿಂದಾದ ಪ್ರತಿ ಸಾವಿಗೆ ಡಾ. ಸುಧಾಕರ್ ಕಾರಣ. ಡಿ.ಕೆ. ಶಿವಕುಮಾರ್. ಎಚ್.ಡಿ. ಕುಮಾರಸ್ವಾಮಿ ಸಾಚಾ ಎಂದು ನಾನು ಹೇಳುತ್ತಿಲ್ಲ. ಎಲ್ಲರೂ ನಮ್ಮನ್ನು ಕೊಲ್ಲುತ್ತಿದ್ದೀರಿ. ಇದು ನನ್ನ ಡೆತ್ ನೋಟ್. ನನ್ನ ಸಾವಿಗೆ ನೀವೆಲ್ಲರೂ ಕಾರಣ’ ಎಂದು ಗುರುಪ್ರಸಾದ್ ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ.
Director Guruprasad mata tested covid positive. Alleges Karnataka ministers CM and Dr Sudhakar will be responsible for my death on Facebook live video.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm