ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm