ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm