ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm