ಬ್ರೇಕಿಂಗ್ ನ್ಯೂಸ್
24-04-21 06:22 pm Source: FILMIBEAT ಸಿನಿಮಾ
ಕನ್ನಡ ಕಿರುತೆರೆಯ ಖ್ಯಾತ ನಟ ಪವನ್ ಕುಮಾರ್ ಕೋವಿಡ್ ನಿಂದಾಗಿ ತಮ್ಮ ಭಾವ ಹಾಗೂ ಅವರ ತಂದೆಯನ್ನು ಕಳೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ಆಸ್ಪತ್ರೆ, ಬೆಡ್, ಆಮ್ಲಜನಕ ಸಿಗದೆ ಕೇವಲ ಎರಡು ದಿನಗಳ ಅಂತರದಲ್ಲಿ ಇಬ್ಬರನ್ನು ಕಳೆದುಕೊಂಡಿದ್ದಾರೆ. ಎಷ್ಟು ಪರದಾಡಿದರೂ ಆಸ್ಪತ್ರೆ, ಚಿಕಿತ್ಸೆ ಸಿಗದೆ ನರಳಾಡಿದ ಭಯಾನಕ ಸನ್ನಿವೇಶವನ್ನು ಪವನ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಸರ್ಕಾರ ಜನಗಳನ್ನು ಸಾಮೂಹಿಕವಾಗಿ ಕೊಲೆ ಮಾಡುತ್ತಿದೆ' ಎಂದು ಸರ್ಕಾರದ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪವನ್ ವಿಡಿಯೋವನ್ನು ಶೇರ್ ಮಾಡಿ, ಹೃದಯವಿದ್ರಾವಕ ಮಾತುಗಳನ್ನು ಕೇಳಿ ಎಂದು ಹೇಳಿದ್ದಾರೆ. ಮುಂದೆ ಓದಿ..
ಸಿದ್ದರಾಮಯ್ಯ ಪ್ರತಿಕ್ರಿಯೆ
'ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ @BJP4Karnataka ಸರ್ಕಾರದ ಭ್ರಷ್ಟಾಚಾರ, ಅಕ್ರಮ ಮತ್ತು ನಿಷ್ಕ್ರಿಯತೆಯಿಂದ ತನ್ನವರನ್ನು ಕಳೆದುಕೊಂಡ ಈ ದುಃಖತಪ್ತ ಯುವನಟನ ಹೃದಯವಿದ್ರಾವಕ ಮಾತುಗಳನ್ನೊಮ್ಮೆ ಕೇಳಿ' ಎಂದು ಟ್ವೀಟ್ ಮಾಡಿದ್ದಾರೆ.
ಆಸ್ಪತ್ರೆಯ ಭಯಾನಕ ಸ್ಥಿತಿ ಬಿಚ್ಚಿಟ್ಟ ಪವನ್
ನಟ ಪವನ್ ವಿಡಿಯೋ ಮೂಲಕ ಮಾತನಾಡಿ, 'ನಾನು ಕಣ್ಣಾರೆ ನೋಡಿದ್ದೇನೆ ಆಸ್ಪತ್ರೆಗಳಲ್ಲಿ ಬೆಡ್ಗಳಿಲ್ಲ, ಆಮ್ಲಜನಕವಿಲ್ಲ. ಆಂಬುಲೆನ್ಸ್ ಗಳಲ್ಲಿ ರೋಗಿಗಳನ್ನು ಇಟ್ಟುಕೊಂಡು ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗುತ್ತಿದ್ದಾರೆ. ಸ್ವತಃ ನಾನೇ ಭಾವನಿಗೆ ಆಮ್ಲಜನಕ ಅರೆಂಜ್ ಮಾಡಲು ರಾತ್ರಿಯೆಲ್ಲ ಬೀದಿಗಳಲ್ಲಿ ಅಲೆದಿದ್ದೇನೆ' ಎಂದು ಅಳಲು ತೋಡಿಕೊಂಡಿದ್ದಾರೆ.
ಸರ್ಕಾರ ರೆಮ್ಡಿಸಿವರ್ ಅನ್ನು ರಫ್ತು ಮಾಡುತ್ತಿದೆ
'ಜನರ ಜೀವ ಉಳಿಸುವ ರೆಮ್ಡಿಸಿವರ್ ಅನ್ನು ಬೇರೆ ದೇಶಕ್ಕೆ ರಫ್ತು ಮಾಡುತ್ತಾ ಕೂತಿದ್ದಾನೆ. ಹೌದು ಈಗ ನಿಲ್ಲಿಸಿದ್ದಾರೆ. ಆದರೂ ನಮಗೆ ಸಿಗುತ್ತಾ ಇಲ್ಲ. ಇನ್ನೂ ಎಷ್ಟು ದಿನ ಒದ್ದಾಡಬೇಕು, ಎಷ್ಟು ಜನ ಸಾಯಬೇಕು. ಈ ಹಿಂದೆ ಕೊರೊನಾ ಬಂದಾಗ ನಾವು ತಯಾರಾಗಿರಲಿಲ್ಲ, ಓಕೆ ಆದರೆ ಈಗ ಏನಾಗಿದೆ ಸರ್ಕಾರಕ್ಕೆ' ಎಂದು ಪ್ರಶ್ನಿಸಿದ್ದಾರೆ.
ಸರ್ಕಾರ ಮುನ್ನೆಚ್ಚರಿಕೆ ವಹಿಸಿದ್ದರೆ ಹೀಗೆ ಆಗುತ್ತಿರಲಿಲ್ಲ
'ಈ ಹಿಂದೆ 10,000 ಬೆಡ್ಗಳನ್ನು ಹಾಕಿದ್ದರಲ್ಲ ಎಲ್ಲಿ ಹೋಯಿತು ಅದು. ಸರ್ಕಾರ ಸರಿಯಾಗಿ ಮುನ್ನೆಚ್ಚರಿಕೆ ವಹಿಸಿದ್ದಿದ್ದರೆ ಈಗ ಹೀಗೆ ಆಗುತ್ತಿರಲಿಲ್ಲ. ನಮ್ಮ ಭಾವ ಬದುಕಿರುತ್ತಿದ್ದರು. ಒಂದೇ ದಿನ ಆರು ಸಾವುಗಳನ್ನು ನಾನು ನೋಡಿದೆ. ಮಾನಸಿಕವಾಗಿ ಜರ್ಜರಿತವಾಗಿ ಹೋಗಿದ್ದೇನೆ' ಎಂದಿದ್ದಾರೆ.
This News Article Is A Copy Of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm