ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
03-09-26 09:51 pm
HK News Staffer
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm
ನೀಟ್ ಪರೀಕ್ಷೆ ಅಕ್ರಮ ; ಸುನಿಲ್ ಕುಮಾರ್ ರಾಜೀನಾಮೆಗೆ...
02-09-26 07:18 pm