ಬ್ರೇಕಿಂಗ್ ನ್ಯೂಸ್
28-04-21 11:16 am Headline Karnataka News Network ಸಿನಿಮಾ
ಬೆಂಗಳೂರು, ಎ.28: ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಮಾಡಲಾಗಿದ್ದು ತಮ್ಮನನ್ನು ಉಳಿಸಿಕೊಡಿ ಎಂದು ನವರಸ ನಾಯಕ ಜಗ್ಗೇಶ್ ಮಂತ್ರಾಲಯದ ರಾಯರ ಪಾದಕ್ಕೆ ಶರಣಾಗಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಹೇಳಿಕೊಂಡಿರುವ ನಟ ಜಗ್ಗೇಶ್ "ತಮ್ಮನಿಗೆ ಕೊರೊನಾ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು , ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ ! ಅವನಿಗೆ ಸಹಾಯ ಮಾಡಿದ ಡಾ.ಮಧುಮತಿ, ನಾದಿನಿ ಡಾ. ಲಲಿತ, ನರ್ಸ್ ಗಳ ಪಾದಕ್ಕೆ ನನ್ನ ನಮನ ಎಂದಿದ್ದಾರೆ.

ಅಲ್ಲದೆ ನಾನು ಇಷ್ಟು ದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು!ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ! ಅದು ಒಂದೇ ರಾಯರೇ ನಾನು ಕಾಯಾವಾಚಾ ಮನಸಾ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗೂ ಕೇಡು ಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆ ತಾಯಿಯನ್ನು ನೋಯಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಟೆಯಿಂದ ಮಾಡಿದ್ದರೆ, ಕಾಯಕ ಮಾಡುವ ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದರೆ ಸಾವಿನ ಮನೆ ಕದ ತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು! ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದು ಬಂದು ಪಕ್ಕ ನಿಂತು ಅವನ ಉಳಿಸಿಬಿಟ್ಟರು ! komal is safe..

ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ! ಆದರೆ ಇತ್ತೀಚೆಗೆ ತನಗೆ ಬರಬೇಕಾದ billಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು! ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ!" ಎಂದಿದ್ದಾರೆ.
ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು!ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು!komal is safe🙏ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು
— ನವರಸನಾಯಕ ಜಗ್ಗೇಶ್ (@Jaggesh2) April 27, 2021
ಸ್ವಂತ ವ್ಯೆವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ!ಆದರೆ ಇತ್ತೀಚೆಗೆ ತನಗೆ ಬರಬೇಕಾದ bill
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm