ಬ್ರೇಕಿಂಗ್ ನ್ಯೂಸ್
29-04-21 03:20 pm Source: FILMIBEAT ಸಿನಿಮಾ
ಕೊರೊನಾ ಎರಡನೇ ಅಲೆ ದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣ ಮಾಡಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆೆ. ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಮೊರೆಹೇದರೆ, ಇನ್ನು ಕೆಲವು ಕಡೆ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇಂಥ ಕಠಿಣ ಪರಿಸ್ಥಿತಿಯನ್ನು ಕೆಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೋವಿಡ್ ನಿಯಮ ಉಲ್ಲಂಘಿಸಿ ಚಿತ್ರೀಕರಣ ಮಾಡುತ್ತಿದ್ದ ಬಾಲಿವುಡ್ ನಟ ಜಿಮ್ಮಿ ಶೇರ್ ಗಿಲ್ ಮತ್ತು ನಿರ್ದೇಶಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಪಂಜಾಬಿನಲ್ಲಿ ನಡೆದಿದೆ. ಕೊರೊನಾ ಲಾಕ್ ಡೌನ್ ಧಿಕ್ಕರಿಸಿ ಪಂಜಾಬ್ ನ ಲೂಧಿಯಾನದಲ್ಲಿ ವೆಬ್ ಸೀರಿಸ್ ಚಿತ್ರೀಕರಣ ಮಾಡುತ್ತಿದ್ದರು.
ನಟ ಜಿಮ್ಮಿ ಶೇರ್ ಗಿಲ್ ಮತ್ತು ವೆಬ್ ಸೀರಿಸ್ ನಿರ್ದೇಶಕ ಈಶ್ವರ್ ನಿವಾಸ್ ಸೇರಿದಂತೆ ಚಿತ್ರತಂಡದ 35 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಯುವರ್ ಹಾನರ್ ಎನ್ನುವ ವೆಬ್ ಸರಣಿ ಚಿತ್ರೀಕರಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅನುಮತಿ ಇಲ್ಲದೆ ಖಾಸಗಿ ಶಾಲೆಯಲ್ಲಿ ಚಿತ್ರೀಕರಣ ಮಾಡುತ್ತಿದ್ದರು.
ರಾತ್ರಿ 8 ಗಂಟೆ ಸುಮಾರಿಗೆ 150 ಜನ ಸಿಬ್ಬಂದಿ ಖಾಸಗಿ ಶಾಲೆಯಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಈ ಸಮಯದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ನಟ, ನಿರ್ದೇಶ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಅನೇಕ ಸಿನಿ ಸೆಲೆಬ್ರಿಟಿಗಳು ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬಾಲಿವುಡ್ ನ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಗುಣಮುಖರಾಗಿದ್ದಾರೆ. ಅಕ್ಷಯ್ ಕುಮಾರ್, ಆಮೀರ್ ಖಾನ್, ಅಲಿಯಾ ಭಟ್, ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಸದ್ಯ ಮುಂಬೈಯಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು ಸಿನಿ ಕೆಲಸಗಳಿಗೆ ಬ್ರೇಕ್ ಬಿದ್ದಿದೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm