ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm