ಬ್ರೇಕಿಂಗ್ ನ್ಯೂಸ್
04-05-21 10:15 am Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಕೋವಿಡ್-19 ಪರಿಸ್ಥಿತಿಯನ್ನು ದುಡ್ಡು ಮಾಡಲು ಬಳಿಸಿಕೊಂಡಿದ್ದಾರೆ, ಅವರೊಬ್ಬ ಮೋಸಗಾರ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್ ಗೆ ಕಂಗನಾ ಲೈಕ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಭೀಕರ ಪರಿಸ್ಥಿತಿ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಕೆಲವು ಸಿನಿಮಾ ಗಣ್ಯರು ತನ್ನ ಕೈಲಾದ ಸಹಾಯ ಮಾಡುತ್ತಿದ್ದಾರೆ. ನಟ ಸೋನು ಸೂದ್ ಕಳೆದ ವರ್ಷ ಮತ್ತು ಈ ವರ್ಷವೂ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿದ್ದಾರೆ.

ಸೋನು ಸೂದ್ ಮಾನವೀಯ ಕೆಲಸಕ್ಕೆ ಎಲ್ಲರೂ ಶ್ಲಾಘಿಸುತ್ತಿದ್ದಾರೆ. ರಿಯಲ್ ಹೀರೋ ಎಂದು ಕರೆದು, ದೇವರಂತೆ ಪೂಜಿಸುತ್ತಿದ್ದಾರೆ. ಈ ನಡುವೆಯೂ ಸೋನು ಸೂದ್ ಅವರನ್ನು ಟ್ರೋಲ್ ಮಾಡುವವರು ಮತ್ತು ಟೀಕಿಸುವವರ ಸಂಖ್ಯೆಯು ಕಡಿಮೆ ಏನಿಲ್ಲ. ಸೋನು ಸೂದ್ ಕೆಲಸವನ್ನು ಅಣಕಿಸಿದವರಲ್ಲಿ ನಟಿ ಕಂಗನಾ ರಣಾವತ್ ಕೂಡ ಒಬ್ಬರು.

ಇತ್ತೀಚಿಗೆ ಸೋನು ಸೂದ್ ಅವರ ಆಕ್ಸಿಜನ್ ಸಾಂದ್ರಕದ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಜಾಹೀರಾತಿನಲ್ಲಿ ಆಕ್ಸಿಜನ್ ಸಾಂದ್ರಕದ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ. ಈ ಜಾಹೀರಾತಿನ ಪೋಸ್ಟರಿಗಾಗಿ ಸೋನು ಸೂದ್ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದೆ. ವಂಚಕ, ಮೋಸಗಾರ ಎಂದು ಕರೆಯುತ್ತಿದ್ದಾರೆ. ಈ ಜಾಹಿರಾತಿನ ಸ್ಕ್ರೀನ್ ಶಾಟ್ ಅನ್ನು ನಟಿ ಕಂಗನಾ ರಣಾವತ್ ಕೂಡ ಲೈಕ್ ಮಾಡಿದ್ದಾರೆ. ಕಂಗನಾ ಲೈಕ್ ಮಾಡಿರುವುದು ಸೋನು ಸೂದ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಕಳೆದ ವರ್ಷದಿಂದ ನಿರಂತರವಾಗಿ ಮಾನವೀಯ ಕೆಲಸ ಮಾಡುತ್ತಿರುವ ಸೋನು ಸೂದ್ ಅವರನ್ನು ವಂಚಕ ಎಂದಿರುವ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm