ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm