ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm