ಬ್ರೇಕಿಂಗ್ ನ್ಯೂಸ್
04-05-21 11:14 am Source: FILMIBEAT Manjunatha C ಸಿನಿಮಾ
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೊನಾ ಸೋಂಕಿಗೆ ತುತ್ತಾಗಿ ನಿಧನ ಹೊಂದಿದ್ದಾರೆ. ಈ ವಿಷಯವನ್ನು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
'ಕೋವಿಡ್ನಿಂದಾಗಿ ನನ್ನ ಸಹೋದರನನ್ನು ನಾನು ಕಳೆದುಕೊಂಡೆ. ಕಿರಣ್, ಈ ದುಃಖವನ್ನು ಹೇಗೆ ಹೇಳಿಕೊಳ್ಳಲಿ ಎಂದು ನನಗೆ ಗೊತ್ತಾಗುತ್ತಿಲ್ಲ. ನೀನಿರದೆ ಇರುವುದು ಕಷ್ಟ. ನನ್ನ ಕೊನೆಯ ಉಸಿರಿನವರೆಗೆ ನೀನು ನನ್ನ ಉಸಿರಿನಲ್ಲಿ ಇರುತ್ತೀಯ' ಎಂದು ಅರ್ಜುನ್ ಜನ್ಯ ಪೋಸ್ಟ್ ಮಾಡಿದ್ದಾರೆ.
ತಮ್ಮ ಏಳಿಗೆಯಲ್ಲಿ ಸಹೋದರ ಕಿರಣ್ ಪಾತ್ರ ದೊಡ್ಡದು ಎಂದು ಹಿಂದೊಮ್ಮೆ ಹೇಳಿಕೊಂಡಿದ್ದರು ಅರ್ಜುನ್ ಜನ್ಯ. ಹಾಗಾಗಿ ಸಹೋದರನ ಅಗಲಿಕೆ ಅರ್ಜುನ್ ಜನ್ಯ ಅವರಿಗೆ ತೀವ್ರ ದುಃಖ ತಂದಿದೆ.
ಅರ್ಜುನ್ ಜನ್ಯಗೆ ಸಹ ಕೊರೊನಾ ಬಂದಿತ್ತು. ಏಪ್ರಿಲ್ ಎರಡನೇ ವಾರದಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅರ್ಜುನ್ ಜನ್ಯ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಐಸೋಲೇಷನ್ಗೆ ಒಳಗಾಗಿದ್ದರು. ಹತ್ತು ದಿನಗಳ ನಂತರ ಜನ್ಯ ಅವರಿಗೆ ನೆಗೆಟಿವ್ ಬಂತು. ಕಳೆದ ವರ್ಷ ಫೆಬ್ರವರಿಯಲ್ಲಿ ಅರ್ಜುನ್ ಜನ್ಯ ತೀವ್ರ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅರ್ಜುನ್ ಜನ್ಯಗೆ ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm