ಬ್ರೇಕಿಂಗ್ ನ್ಯೂಸ್
04-05-21 11:14 am Source: FILMIBEAT Manjunatha C ಸಿನಿಮಾ
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೊನಾ ಸೋಂಕಿಗೆ ತುತ್ತಾಗಿ ನಿಧನ ಹೊಂದಿದ್ದಾರೆ. ಈ ವಿಷಯವನ್ನು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
'ಕೋವಿಡ್ನಿಂದಾಗಿ ನನ್ನ ಸಹೋದರನನ್ನು ನಾನು ಕಳೆದುಕೊಂಡೆ. ಕಿರಣ್, ಈ ದುಃಖವನ್ನು ಹೇಗೆ ಹೇಳಿಕೊಳ್ಳಲಿ ಎಂದು ನನಗೆ ಗೊತ್ತಾಗುತ್ತಿಲ್ಲ. ನೀನಿರದೆ ಇರುವುದು ಕಷ್ಟ. ನನ್ನ ಕೊನೆಯ ಉಸಿರಿನವರೆಗೆ ನೀನು ನನ್ನ ಉಸಿರಿನಲ್ಲಿ ಇರುತ್ತೀಯ' ಎಂದು ಅರ್ಜುನ್ ಜನ್ಯ ಪೋಸ್ಟ್ ಮಾಡಿದ್ದಾರೆ.
ತಮ್ಮ ಏಳಿಗೆಯಲ್ಲಿ ಸಹೋದರ ಕಿರಣ್ ಪಾತ್ರ ದೊಡ್ಡದು ಎಂದು ಹಿಂದೊಮ್ಮೆ ಹೇಳಿಕೊಂಡಿದ್ದರು ಅರ್ಜುನ್ ಜನ್ಯ. ಹಾಗಾಗಿ ಸಹೋದರನ ಅಗಲಿಕೆ ಅರ್ಜುನ್ ಜನ್ಯ ಅವರಿಗೆ ತೀವ್ರ ದುಃಖ ತಂದಿದೆ.
ಅರ್ಜುನ್ ಜನ್ಯಗೆ ಸಹ ಕೊರೊನಾ ಬಂದಿತ್ತು. ಏಪ್ರಿಲ್ ಎರಡನೇ ವಾರದಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅರ್ಜುನ್ ಜನ್ಯ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಐಸೋಲೇಷನ್ಗೆ ಒಳಗಾಗಿದ್ದರು. ಹತ್ತು ದಿನಗಳ ನಂತರ ಜನ್ಯ ಅವರಿಗೆ ನೆಗೆಟಿವ್ ಬಂತು. ಕಳೆದ ವರ್ಷ ಫೆಬ್ರವರಿಯಲ್ಲಿ ಅರ್ಜುನ್ ಜನ್ಯ ತೀವ್ರ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅರ್ಜುನ್ ಜನ್ಯಗೆ ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm