ಬ್ರೇಕಿಂಗ್ ನ್ಯೂಸ್
05-05-21 04:56 pm Source: FILMIBEAT Shruthi Gk ಸಿನಿಮಾ
ನಾನು ಆರೋಗ್ಯವಾಗಿ, ಆರಾಮಾಗಿ ಮನೆಯಲ್ಲಿ ಇದ್ದೀನಿ ಎಂದು ವಿಡಿಯೋ ಮೂಲಕ ನಟ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ. ದೊಡ್ಡಣ್ಣ ಇನ್ನಿಲ್ಲ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದೊಡ್ಡಣ್ಣ ಫೋಟೋ ಹಾಕಿ RIP ಅಂತ ಬರೆದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಈ ಪೋಸ್ಟ್ ನೋಡಿ ಆತಂಕಗೊಂಡ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ದೊಡ್ಡಣ್ಣ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಸಾಕಷ್ಟು ಫೋನ್ ಕರೆಗಳು ಬರುತ್ತಿದ್ದಂತೆ ನಟ ದೊಡ್ಡ ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ನಾನು ಸತ್ತಿಲ್ಲ ಬದುಕಿದ್ದೀನಿ ಎಂದು ಹೇಳಿದ್ದಾರೆ.
'ಯಾರೋ ಕಿಡಿಗೇಡಿಗಳು ನನ್ನ ಫೋಟೋ ಹಾಕಿ rip ಅಂತ ಹಾಕಿದ್ದಾರೆ. ದೊಡ್ಡಣ್ಣ ನಿಧನರಾಗಿದ್ದಾರೆ ಎನ್ನುವ ಹಾಗೆ ಹಾಕಿದ್ದಾರೆ. ನೂರಾರು ಫೋನ್ ಬರ್ತಿದೆ. ಎಲ್ಲರಿಗೂ ಹೇಳಲು ಇಷ್ಟಪಡುತ್ತೇನೆ. ನಾನು ಮನೆಯಲ್ಲೇ ಇದ್ದೀನಿ, ಆರೋಗ್ಯವಾಗಿ, ಆರಾಮಾಗಿ ಇದ್ದೀನಿ. ಯಾರು ಭಯ ಪಡಬೇಕಾಗಿಲ್ಲ. ಕನ್ನಡ ನಾಡಿನ ಎಲ್ಲಾ ತಂದೆ-ತಾಯಿಗಳ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಿಮ್ಮ ದೊಡ್ಡಣ್ಣನಿಗೆ ಏನು ಆಗಲ್ಲ. ಆಯಸ್ಸು ಜಾಸ್ತಿ. ಯಾವುದೊ ಒಂದು ಕಂಟಕ ಭಗೆಹರಿಯಿತು ಅಂತ ಅಂದುಕೊಳ್ಳುತ್ತೇನೆ. ನಾನು ಆರೋಗ್ಯವಾಗಿ ಇದ್ದೀನಿ' ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ನೋಡಿ ಆತಂಕಗೊಂಡ ದೊಡ್ಡಣ್ಣ ಗೆಳೆಯ ಹಿರಿಯ ನಟ ಡಿಂಗ್ರಿ ನಾಗರಾಜ್ ಕೂಡ ಕರೆಮಾಡಿ ವಿಚಾರಿಸಿದ್ದಾರೆ. ಬಳಿಕ ಡಿಂಗ್ರಿ ನಾಗರಾಜ್ ಮಾತನಾಡಿ, 'ದೊಡ್ಡಣ್ಣ ಆರೋಗ್ಯವಾಗಿದ್ದಾರೆ. ಈಗ ತಾನೆ ಅವರ ಜೊೆತೆ ಮಾತನಾಡಿದ್ದೇನೆ. ನೋಡು ನಾಗು ಯಾವನೋ ಹಾಕ್ಬಿಟ್ಟಿದ್ದಾನೆ. ನಿಂದು ಸೇರಿ 21ನೇ ಫೋನ್ ಅಂತ ಹೇಳಿದ್ರು. ದೊಡ್ಡಣ್ಣ ಚೆನ್ನಾಗಿದ್ದಾರೆ.' ಎಂದು ಸ್ಪಷ್ಟೆನೆ ನೀಡಿದ್ದರು.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm