ಬ್ರೇಕಿಂಗ್ ನ್ಯೂಸ್
06-05-21 11:43 am Source: FILMIBEAT Shruthi Gk ಸಿನಿಮಾ
ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಕೊರೊನಾ ಕಾರಣಕ್ಕೆ ನಿಧನ ಹೊಂದಿದ್ದಾರೆ. ಆ ಸಾಲಿಗೆ ಇಂದು ಮತ್ತೊಂದು ಸೇರ್ಪಡೆಯಾಗಿದೆ. ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಅವರು ಕೊರೊನಾದಿಂದಾಗಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
'ಕವಿರತ್ನ ಕಾಳಿದಾಸ', 'ಅಂಜದ ಗಂಡು', 'ಕಿಂದರ ಜೋಗಿ' ಸೇರಿದಂತೆ ಹಲವು ಸಿನಿಮಾಗಳನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡಿದ್ದರು.
ಎರಡು ದಿನಗಳ ಹಿಂದಷ್ಟೆ ರೇಣುಕಾ ಶರ್ಮಾ ಅವರನ್ನು ಕೊರೊನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರೇಣುಕಾ ಶರ್ಮಾ ನಿಧನ ಹೊಂದಿದ್ದಾರೆ. ಮೈಸೂರಿನ ಟಿ.ನರಸೀಪುರದವರಾದ ರೇಣುಕಾ ಶರ್ಮಾ ಅವರು 1960 ರಲ್ಲಿ ಚಿತ್ರರಂಗ ಪ್ರವೇಶಿಸಿದವರು.

ಸಿನಿಮಾ ನಟ ಆಗಲೇಬೇಕೆಂಬ ಕನಸು ಹೊತ್ತು ಮದ್ರಾಸಿಗೆ ಹೋಗಿ ಮೊದಲ ಬಾರಿಗೆ 'ಸರ್ವಜ್ಞ ಮೂರ್ತಿ' ಸಿನಿಮಾಕ್ಕೆ ಸಹಾಯಕನಾಗಿ ಕೆಲಸ ಮಾಡಿ ಅಲ್ಲಿಂದ ಸಿನಿಮಾ ಪಯಣ ಆರಂಭಿಸಿದರು. 20 ವರ್ಷಗಳ ಬಳಿಕ 1980 ರಲ್ಲಿ ಮೊದಲ ಬಾರಿಗೆ ಸ್ವಂತವಾಗಿ ನಿರ್ದೇಶನ ಮಾಡಿದರು.
ರೇಣುಕಾ ಶರ್ಮಾ ಮೊದಲ ಸಿನಿಮಾ 'ಅನುಪಮಾ'. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ರೇಣುಕಾ ಶರ್ಮಾ ಜಯಲಲಿತಾ, ಎಎನ್ಆರ್ ಅವರ ಸಿನಿಮಾಗಳಿಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm