ಬ್ರೇಕಿಂಗ್ ನ್ಯೂಸ್
06-05-21 11:43 am Source: FILMIBEAT Shruthi Gk ಸಿನಿಮಾ
ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಕೊರೊನಾ ಕಾರಣಕ್ಕೆ ನಿಧನ ಹೊಂದಿದ್ದಾರೆ. ಆ ಸಾಲಿಗೆ ಇಂದು ಮತ್ತೊಂದು ಸೇರ್ಪಡೆಯಾಗಿದೆ. ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಅವರು ಕೊರೊನಾದಿಂದಾಗಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
'ಕವಿರತ್ನ ಕಾಳಿದಾಸ', 'ಅಂಜದ ಗಂಡು', 'ಕಿಂದರ ಜೋಗಿ' ಸೇರಿದಂತೆ ಹಲವು ಸಿನಿಮಾಗಳನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡಿದ್ದರು.
ಎರಡು ದಿನಗಳ ಹಿಂದಷ್ಟೆ ರೇಣುಕಾ ಶರ್ಮಾ ಅವರನ್ನು ಕೊರೊನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರೇಣುಕಾ ಶರ್ಮಾ ನಿಧನ ಹೊಂದಿದ್ದಾರೆ. ಮೈಸೂರಿನ ಟಿ.ನರಸೀಪುರದವರಾದ ರೇಣುಕಾ ಶರ್ಮಾ ಅವರು 1960 ರಲ್ಲಿ ಚಿತ್ರರಂಗ ಪ್ರವೇಶಿಸಿದವರು.

ಸಿನಿಮಾ ನಟ ಆಗಲೇಬೇಕೆಂಬ ಕನಸು ಹೊತ್ತು ಮದ್ರಾಸಿಗೆ ಹೋಗಿ ಮೊದಲ ಬಾರಿಗೆ 'ಸರ್ವಜ್ಞ ಮೂರ್ತಿ' ಸಿನಿಮಾಕ್ಕೆ ಸಹಾಯಕನಾಗಿ ಕೆಲಸ ಮಾಡಿ ಅಲ್ಲಿಂದ ಸಿನಿಮಾ ಪಯಣ ಆರಂಭಿಸಿದರು. 20 ವರ್ಷಗಳ ಬಳಿಕ 1980 ರಲ್ಲಿ ಮೊದಲ ಬಾರಿಗೆ ಸ್ವಂತವಾಗಿ ನಿರ್ದೇಶನ ಮಾಡಿದರು.
ರೇಣುಕಾ ಶರ್ಮಾ ಮೊದಲ ಸಿನಿಮಾ 'ಅನುಪಮಾ'. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ರೇಣುಕಾ ಶರ್ಮಾ ಜಯಲಲಿತಾ, ಎಎನ್ಆರ್ ಅವರ ಸಿನಿಮಾಗಳಿಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm