ಬ್ರೇಕಿಂಗ್ ನ್ಯೂಸ್
06-05-21 11:54 am Source: FILMIBEAT Shruthi Gk ಸಿನಿಮಾ
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ.
ಆದರೆ ಚಿಕ್ಕಣ್ಣ ಮತ್ತೆ ತಮ್ಮ ಹಳೆ ವೃತ್ತಿಗೆ ಮರಳಿದ್ದಾರೆ. ಹೌದು, ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದಾರೆ. ಆದರೆ ಬೇರೆಯವರ ಮನೆಯ ಗಾರೆ ಕೆಲಸ ಅಲ್ಲ ಬದಲಿಗೆ ತಮ್ಮದೇ ತೋಟದ ಮನೆಯ ಗಾರೆ ಕೆಲಸ ಮಾಡುತ್ತಿದ್ದಾರೆ.
ಮೈಸೂರಿನ ಬಳಿ ದೊಡ್ಡ ಫಾರ್ಮ್ ನಿರ್ಮಿಸಿರುವ ಚಿಕ್ಕಣ್ಣ ಅಲ್ಲಿಯೇ ಸಣ್ಣದೊಂದು ಮನೆ ನಿರ್ಮಾಣ ಮಾಡುತ್ತಿದ್ದು, ಮನೆ ನಿರ್ಮಾಣ ಕಾರ್ಯಕ್ಕೆ ತಾವೇ ಕೈ ಜೋಡಿಸಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಚಿತ್ರೀಕರಣ ಇಲ್ಲದ ಕಾರಣ ಸಮಯದ ಸದುಪಯೋಗಕ್ಕಾಗಿ ತಾವು ಗಾರೆ ಕೆಲಸ ಮಾಡುತ್ತಿದ್ದಾರೆ ಚಿಕ್ಕಣ್ಣ.
ನಟ ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಮೆಂಟು ಕಲಸಿ ಗೋಡೆಗೆ ಹಚ್ಚಿ ಸಪಾಟು ಮಾಡುವ ಕಾರ್ಯವನ್ನು ಚಿಕ್ಕಣ್ಣ ಮಾಡುತ್ತಿದ್ದಾರೆ. ಚಿಕ್ಕಣ್ಣನ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
This News Article Is A Copy Of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm