ಬ್ರೇಕಿಂಗ್ ನ್ಯೂಸ್
20-05-21 05:11 pm Filmbeat : Shruthi K ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತನ್ನ ಟ್ರಸ್ಟ್ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಯಲ್ಲಿ ಕಿಚ್ಚನ ಟ್ರಸ್ಟ್ ಸಾಕಷ್ಟು ಮಾನವೀಯ ಕೆಲಸ ಮಾಡುತ್ತಿದೆ. ಲಾಕ್ ಡೌನ್ ನಿಂದ ಕೆಲಸವಿಲ್ಲದೆ ಪರದಾಡುತ್ತಿರುವ ಸಿನಿಮಾ ಕಾರ್ಮಿಕರ ನೆರವಿಗೆ ನಿಂತಿರುವ ಸುದೀಪ್, ಇದೀಗ ಹಿರಿಯ ಕಲಾವಿದರ ಸಹಾಯಕ್ಕೂ ಧಾವಿಸಿದ್ದಾರೆ.
ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಲು ಸುದೀಪ್ ಒಂದು ತಂಡ ರಚಿಸಿದ್ದು, ಆ ತಂಡದ ಮೂಲಕ ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಅವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಿ ಅದರ ಜೊತೆಗೆ ಒಂದು ಪ್ರೀತಿಯ ಪತ್ರವನ್ನು ಬರೆದು ಕಳುಹಿಸುತ್ತಿದ್ದಾರೆ.
'ನನ್ನ ಕುಟುಂಬದ ಹಿರಿಯರು ನೀವು. ನೀವೆಲ್ಲ ಹೇಗಿದ್ದೀರಿ? ಪ್ರೀತಿಯಿಂದ ನಿಮ್ಮ ಕಿಚ್ಚ ಸುದೀಪ್' ಎಂದು ಪತ್ರದಲ್ಲಿ ಬರೆಯಲಾಗಿದೆ. ನೂರಕ್ಕೂ ಹಿರಿಯ ಕಲಾವಿದರಿಗೆ ಅಗತ್ಯ ವಸ್ತು ಜೊತೆಗೆ ಕಿಚ್ಚನ ಯೋಗಕ್ಷೇಮದ ಪತ್ರ ತಲುಪಿದೆ. ಹಿರಿಯ ಕಲಾವಿದರಾದ ಗಿರಿಜಾ ಲೋಕೇಶ್, ಉಮೇಶ್ ಬಹುತೇಕ ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ.
ಕಷ್ಟ ಎಂದವರಿಗೆ ಸಹಾಯ ಹಸ್ತ ಚಾಚುವ ಕಿಚ್ಚ ಅದೆಷ್ಟೋ ಹಸಿದ ಜೀವಗಳ ಹಸಿವು ನೀಗಿಸಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ ಅನೇಕರ ಮಂದಿಯ ಚಿಕಿತ್ಸೆಗೆ ನೆರವಾಗಿದ್ದಾರೆ. ಇತ್ತೀಚಿಗಷ್ಟೆ ಬಿಗ್ ಬಾಸ್ ಸ್ಪರ್ಧಿ ಮತ್ತು ನಟಿ ಸೋನು ಪಾಟೀಲ್ ತಾಯಿಯ ಆಸ್ಪತ್ರೆಗೆ ಬಿಲ್ ಪಾವತಿಸಿದ್ದಾರೆ. ಅಭಿಮಾನಿ ಸೌಮ್ಯಾ ಅವರ ಪತಿಗೆ ಸಹಾಯ ಹಸ್ತ ಚಾಚಿದ್ದಾರೆ. ಕಿಚ್ಚನ ಸಹಾಯ ನೆನೆದು ಅನೇಕರು ವಿಡಿಯೋ ಮೂಲಕ ಧನ್ಯವಾದ ಹೇಳುತ್ತಿದ್ದಾರೆ. ಭಾವುಕರಾಗಿ ಕಾಣ್ಣೀರಾಕುತ್ತಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲದೆ ಇತ್ತೀಚಿಗೆ ಸುದೀಪ್ ಚಾರಿಟೇಬಲ್ ಸೊಸೈಟಿ ಪುಣೆ ಮೂಲದ ವ್ಯಕ್ತಿಯ ಸಹಾಯಕ್ಕೆ ನಿಂತಿದ್ದಾರೆ. ಲಾಕ್ ಡೌನಿ ನಿಂದ ಕೆಲಸವಿಲ್ಲದೆ ಊಟಕ್ಕೂ ಪರದಾಡುತ್ತಿದ್ದ ಗುಡ್ಡ ಪಾಲ್ ಎನ್ನುವ ವ್ಯಕ್ತಿ ಸುದೀಪ್ ಚಾರಿಟೇಬಲ್ ಬಗ್ಗೆ ತಿಳಿದುಕೊಂಡು ಸಂಪರ್ಕ ಮಾಡಿದ್ದಾರೆ. ಬಳಿಕ ಸುದೀಪ್ ಟ್ರಸ್ಟ್ ಅಗತ್ಯ ವಸ್ತುಗಳನ್ನು ಕಳುಹಿಸಿಕೊಟ್ಟಿದ್ದಾರೆ.
(Kannada Copy of film beat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm