ಬ್ರೇಕಿಂಗ್ ನ್ಯೂಸ್
21-05-21 05:27 pm Filmbeat : Bharath Kumar K ಸಿನಿಮಾ
ದಕ್ಷಿಣ ಚಿತ್ರರಂಗದಲ್ಲಿ ತಮ್ಮ ವಿಶಿಷ್ಠ ಮತ್ತು ವಿಭಿನ್ನ ಅಭಿನಯದ ಮೂಲಕ ಖ್ಯಾತಿ ಗಳಿಸಿಕೊಂಡಿದ್ದ ಪೊನ್ನಂಬಲಂ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಿಡ್ನಿ ವೈಫಲ್ಯವಾಗಿದ್ದು, ತೀವ್ರವಾಗಿ ನೊಂದಿದ್ದರು. ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಬೇಕಿದೆ ಎಂದು ಆಸ್ಪತ್ರೆಯ ಬೆಡ್ನಿಂದಲೇ ವಿಡಿಯೋ ಮಾಡಿ ವಿನಂತಿಸಿದ್ದರು.
ಇದೀಗ, ಪೊನ್ನಂಬಲಂ ಕಿಡ್ನಿ ಆಪರೇಷನ್ಗೆ ಮೆಗಾಸ್ಟಾರ್ ಚಿರಂಜೀವಿ ನೆರವು ನೀಡಿರುವುದು ತಿಳಿದು ಬಂದಿದೆ. ಸ್ವತಃ ಪೊನ್ನಂಬಲಂ ಅವರೇ ಮೆಗಾಸ್ಟಾರ್ ಸಹಾಯವನ್ನು ನೆನೆದು ಧನ್ಯವಾದ ತಿಳಿಸಿದ್ದಾರೆ. ವಿಡಿಯೋ ಮಾಡುವ ಮೂಲಕ ಚಿರಂಜೀವಿ ಧನಸಹಾಯ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
2 ಲಕ್ಷ ನೆರವು ನೀಡಿದ ಚಿರಂಜೀವಿ
ನಟ ಪೊನ್ನಂಬಲಂ ಕಿಡ್ನಿ ಆಪರೇಷನ್ಗೆ ಮೆಗಾಸ್ಟಾರ್ ಚಿರಂಜೀವಿ ಎರಡು ಲಕ್ಷ ಧನ ಸಹಾಯ ಮಾಡಿದ್ದಾರೆ. ವಿಡಿಯೋ ಮೂಲಕ ಧನ್ಯವಾದ ತಿಳಿಸಿರುವ ಪೊನ್ನಂಬಲಂ ''ಚಿರಂಜೀವಿ ಅಣ್ಣನಿಗೆ ನಮಸ್ತೆ, ನನ್ನ ಕಿಡ್ನಿ ಆಪರೇಷನ್ಗಾಗಿ ನೀವು ಕೊಟ್ಟ 2 ಲಕ್ಷದಿಂದ ಬಹಳ ದೊಡ್ಡ ಸಹಾಯವಾಗಿದೆ. ಜೀವನಪೂರ್ತಿ ಈ ಸಹಾಯವನ್ನು ನಾನು ಮರೆಯಲ್ಲ. ಆ ದೇವರು ನಿಮಗೆ ಸದಾ ಒಳ್ಳೆಯದು ಮಾಡಲಿ'' ಎಂದು ವಿನಂತಿಸಿದ್ದಾರೆ.

ರಜನಿಕಾಂತ್, ಕಮಲ್ ಹಾಸನ್ ನೆರವು
ಈ ಹಿಂದೆ ಪೊನ್ನಂಬಲಂ ಅನಾರೋಗ್ಯ ವಿಚಾರ ತಿಳಿದಾಗ ಸೂಪರ್ ಸ್ಟಾರ್ ರಜನಿಕಾಂತ್ ಅಭಯಹಸ್ತ ಚಾಚಿದ್ದರು. ಪೊನ್ನಂಬಲಂ ಆರೋಗ್ಯ ವಿಚಾರಿಸಿದ್ದ ತಲೈವಾ, ಆರ್ಥಿಕವಾಗಿ ಸಹಾಯ ಮಾಡಿದ್ದರು. ಕಮಲ್ ಹಾಸನ್ ಪೊನ್ನಂಬಲಂ ಮಕ್ಕಳಿಗೆ ಶಿಕ್ಷಣ ಕೊಡಿಸುವ ಭರವಸೆ ಕೊಟ್ಟಿದ್ದರು. ರಜನಿ-ಕಮಲ್ ಮಾತ್ರವಲ್ಲ ತಮಿಳು ಇಂಡಸ್ಟ್ರಿಯ ಅನೇಕರು ಪೊನ್ನಂಬಲಂಗೆ ನೆರವು ನೀಡಿದ್ದರು.

ಮೆಗಾಸ್ಟಾರ್ ಜೊತೆ ಹೆಚ್ಚು ಸಿನಿಮಾ
ಸ್ಟಂಟ್ ಮ್ಯಾನ್ ಸಿನಿ ಜರ್ನಿ ಆರಂಭಿಸಿದ್ದ ಪೊನ್ನಂಬಲಂ ತಮಿಳಿನಲ್ಲಿ ಹೆಚ್ಚು ಸಿನಿಮಾ ಮಾಡಿದ್ದಾರೆ. 'ಘರಾನ ಮೊಗಡು' ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿ ಪ್ರವೇಶಿಸಿದ ಪೊನ್ನಂಬಲಂ, ಅಲ್ಲರಿ ಪ್ರಿಯಡು, ಮೆಕಾನಿಕ್ ಅಲ್ಲುಡು, ಮುಗ್ಗರು ಮೊನಗಾಳ್ಳು, ಹಿಟ್ಲರ್, ಪವಿತ್ರ ಪ್ರೇಮ, ನುವ್ವು ವಸ್ತಾವನಿ, ಎದುರುಲೇನಿ ಮುನುಷಿ, ಚೆನ್ನಕೇಶವ ರೆಡ್ಡಿ, ಗುಡುಂಬಾ ಶಂಕರ್, ಅನ್ನಾವರಂ ಸೇರಿದಂತೆ ಅನೇಕ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡದಲ್ಲೂ ನಟಿಸಿದ್ದಾರೆ ಪೊನ್ನಂಬಲಂ
ತಮಿಳು, ತೆಲುಗು ಜೊತೆ ಕನ್ನಡದಲ್ಲೂ ಪೊನ್ನಂಬಲಂ ನಟಿಸಿದ್ದಾರೆ. ರವಿಚಂದ್ರನ್ ಅಭಿನಯದ ಚಿನ್ನ, ಲೇಡಿ ಕಮಿಷನರ್, ಕಿಚ್ಚ, ಗುನ್ನಾ, ಮಸ್ತಿ, ಪೊಲೀಸ್ ಸ್ಟೋರಿ 2, ಚೆನ್ನ ಅಂತಹ ಸಿನಿಮಾಗಳಲ್ಲಿ ನಟಿಸಿದ್ದಾರೆ.
(Kannada Copy of Film Beat Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm