ಬ್ರೇಕಿಂಗ್ ನ್ಯೂಸ್
25-05-21 02:28 pm Filmbeat : Bharath Kumar K ಸಿನಿಮಾ
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ದಶಕಗಳಿಂದಲೂ ತೊಡಗಿಕೊಂಡಿದ್ದ ಕನ್ನಡದ ಹಿರಿಯ ಕಲಾವಿದ ಬಿಎಂ ಕೃಷ್ಣೇಗೌಡ ಸೋಮವಾರ ಕೊನೆಯುಸಿರೆಳೆದರು.
80 ವರ್ಷದ ಕೃಷ್ಣೇಗೌಡರಿಗೆ ಇತ್ತೀಚಿಗಷ್ಟೆ ಕೊರೊನಾ ಸೋಂಕು ತಗುಲಿತ್ತು. ನಂತರ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣೇಗೌಡರು ಈಗ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೃಷ್ಣೇಗೌಡರ ನಿಧನಕ್ಕೆ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಸಂತಾಪ ಸೂಚಿಸಿದ್ದಾರೆ. ''ಇತ್ತೀಚಿಗೆ ಐದಾರು ವರ್ಷಗಳವರೆಗೂ ನಾಟಕ ಮಾಡ್ತಿದ್ರು. ಆಮೇಲೆ ಆರೋಗ್ಯದ ಕೆಟ್ಟ ಕಾರಣ ನಟನೆ ನಿಲ್ಲಿಸಿದರು. ಬಹಳ ಸಜ್ಜನ ವ್ಯಕ್ತಿ ಕೊರೊನಾ ಸೋಂಕು ತಗುಲಿತ್ತು. ನಂತರ ಚೇತರಿಸಿಕೊಂಡಿದ್ದರು. ಆದ್ರೀಗ, ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. 40 ವರ್ಷದ ಗೆಳೆಯನನ್ನು ಕಳೆದಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿಗಷ್ಟೆ ಕೃಷ್ಣೇಗೌಡರ ಮಗ ಕೊರೊನಾದಿಂದ ಮೃತಪಟ್ಟಿದ್ದರು. ಮಗ ಸಾವನ್ನಪ್ಪಿದ ಕೆಲವೇ ದಿನದಲ್ಲಿ ಕೃಷ್ಣೇಗೌಡರು ವಿಧಿವಶರಾಗಿರುವುದು ಕುಟುಂಬ ಮತ್ತು ಆಪ್ತರಲ್ಲಿ ದುಃಖ ತಂದಿದೆ.
ಬಿಎಂ ಕೃಷ್ಣೇಗೌಡ ಕುರಿತು ಕರ್ನಾಟಕ ರಾಜ್ಯದ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಅಬ್ಬೂರು ಜಯತೀರ್ಥ, ಆರ್.ನಾಗೇಶ್, ಶ್ರೀನಿವಾಸ ಪ್ರಭು, ಡಾ.ಬಿ.ವಿ.ರಾಜಾರಾಂ ಮುಂತಾದ ನಿರ್ದೇಶಕರ ನಿರ್ದೇಶನದಲ್ಲಿ ಅಭಿನಯಿಸಿದ್ದರು.
ಮುಖ್ಯಮಂತ್ರಿ ನಾಟಕದಲ್ಲಿನ ಪಾತ್ರ ಇವರಿಗೆ ಖ್ಯಾತಿ ತಂದಿತ್ತು. ಚಿತ್ರರಂಗದಲ್ಲಿ ಪೋಷಕ ನಟನೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದಿದ್ದರು. ಕೃಷ್ಣೇಗೌಡರು ಕ್ರೀಡಾ ಕ್ಷೇತ್ರದಲ್ಲೂ ಹೆಸರು ಮಾಡಿದ್ದರು. ರಾಜ್ಯ ಮಟ್ಟದ ಉತ್ತಮ ವಾಲಿಬಾಲ್ ಪಟು ಆಗಿದ್ದವರು.
(Kannada Copy of film beat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm