ಬ್ರೇಕಿಂಗ್ ನ್ಯೂಸ್
04-06-21 11:46 am Headline Karnataka News Network ಸಿನಿಮಾ
ಬೆಂಗಳೂರು, ಜೂನ್ 4: ಚಂದನವನದ ಒಂದೊಂದೇ ಹಿರಿಯ ಕೊಂಡಿಗಳು ಕಳಚಿಕೊಳ್ಳುತ್ತಿವೆ. ಕೆಲವೇ ದಿನಗಳ ಹಿಂದೆ 'ಶಂಖನಾದ' ಅರವಿಂದ್, ಕೃಷ್ಣೇ ಗೌಡ, ನಿರ್ಮಾಪಕ ರಾಮು ಮುಂತಾದವರು ಕೊನೆಯುಸಿರು ಎಳೆದಿದ್ದಾರೆ. ಇದೀಗ ಖ್ಯಾತ ಹಿರಿಯ ನಟಿ ಬಿ. ಜಯಾ ಅವರು ಕೂಡ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಅವರು ಒಂದು ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದರು ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಸುಮಾರು 6 ದಶಕಗಳಿಗೂ ಅಧಿಕ ಸಮಯ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟಿಯಾಗಿ ಜಯಾ ಗುರುತಿಸಿಕೊಂಡಿದ್ದರು. ಅದರಲ್ಲೂ ಮುಖ್ಯವಾಗಿ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜಯಾ ಜನಪ್ರಿಯರಾಗಿದ್ದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದು. ಹಾಸ್ಯ ದಿಗ್ಗಜರಾದ ನರಸಿಂಹರಾಜು, ದ್ವಾರಕೀಶ್ ಮುಂತಾದವರೊಂದಿಗೆ ಜಯಾ ನಟಿಸಿದ ಹಾಸ್ಯ ದೃಶ್ಯಗಳು ಇಂದಿಗೂ ಜನಪ್ರಿಯ. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ರಂಗಭೂಮಿ, ಕಿರುತೆರೆಯಲ್ಲೂ ಅವರು ಬಹಳ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಚಿತ್ರರಂಗ ಮತ್ತು ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.

1958ರಲ್ಲಿ ತೆರೆಕಂಡ 'ಭಕ್ತ ಪ್ರಹ್ಲಾದ' ಸಿನಿಮಾ ಜಯಾ ಅವರು ಚೊಚ್ಚಲ ಸಿನಿಮಾ. ಡಾ. ರಾಜ್ಕುಮಾರ್ ಅವರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಕೀರ್ತಿ ಅವರದ್ದು. ಆಗಿನ ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಈಗಿನ ಯುವ ಪೀಳಿಗೆಯ ನಟರೊಂದಿಗೂ ಜಯಾ ನಟಿಸಿರುವುದು ವಿಶೇಷ.
ಅಂಬರೀಷ್ ನಟನೆಯ 'ಗೌಡ್ರು' ಚಿತ್ರದ ಅಭಿನಯಕ್ಕಾಗಿ ಅವರು ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಪಾತ್ರವಾಗಿದ್ದರು. 'ದೈವಲೀಲೆ', 'ವಿಧಿ ವಿಲಾಸ', 'ಬೆಳ್ಳಿಮೋಡ', 'ಚಿನ್ನದ ಗೊಂಬೆ', 'ಪ್ರತಿಜ್ಞೆ', 'ಮಹದೇಶ್ವರ ಪೂಜಾಫಲ', 'ನ್ಯಾಯವೇ ದೇವರು', 'ಕುಲಗೌರವ', 'ಪೂರ್ಣಿಮಾ', 'ನಗುವ ಹೂವು', 'ಮುಕ್ತಿ', 'ಮಣ್ಣಿನ ಮಗ', 'ಶ್ರೀಕೃಷ್ಣ ದೇವರಾಯ', 'ಜೀವನ ಜೋಕಾಲಿ', 'ದೇವರು ಕೊಟ್ಟ ತಂಗಿ', 'ಗಂಧದ ಗುಡಿ', 'ಶುಭಮಂಗಳ', 'ದಾರಿ ತಪ್ಪಿದ ಮಗ', 'ಪ್ರೇಮದ ಕಾಣಿಕೆ' ಮುಂತಾದ ಸಿನಿಮಾಗಳಲ್ಲಿ ಜಯಾ ನಟಿಸಿದ್ದರು. 1983ರಲ್ಲಿ ಕುಮಾರೇಶ್ವರ ನಾಟಕ ಸಂಘ ಕಟ್ಟಿದ ಬಿ. ಜಯಾ ಅವರು 1992ರವರೆಗೆ ಕಂಪನಿ ನಡೆಸಿದರು.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm