ಬ್ರೇಕಿಂಗ್ ನ್ಯೂಸ್
09-06-21 04:25 pm Filmbeat : Bharath Kumar K ಸಿನಿಮಾ
ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸೆಲೆಬ್ರಿಟಿಗಳು ಹಲವು ರೀತಿಯಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ದಿನಸಿ ಕಿಟ್, ಆಕ್ಸಿಜನ್, ವೆಂಟಿಲೇಟರ್, ಆಂಬುಲೆನ್ಸ್ ಹೀಗೆ ಅನೇಕ ರೀತಿಯಲ್ಲಿ ನೆರವು ನೀಡಿದ್ದಾರೆ.
ಇದೀಗ, ಚೆಸ್ ಆಟಕ್ಕೆ ಸಂಬಂಧಿಸಿದ ಸಮುದಾಯಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಚೆಸ್.ಕಾಮ್ ಸಂಸ್ಥೆ 'ಚೆಕ್ಮೆಟ್ ಕೋವಿಡ್' ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂಬ ವಿಚಾರ ತಿಳಿದಿದೆ.
ಜೂನ್ 13 ರಂದು ಆ ಕಾಂಪಿಟೇಶನ್ ನಡೆಯಲಿದ್ದು, ಐದು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಭಾರತ ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಎದುರು ಸೆಲೆಬ್ರಿಟಿಗಳು ಚೆಸ್ ಆಡಲಿದ್ದಾರೆ.

ಚೆಸ್.ಕಾಮ್ ವಿಶ್ವನಾಥ್ ಆನಂದ್ ಎದುರು ಆಡಲಿರುವ ಮೊದಲ ಸೆಲೆಬ್ರಿಟಿ ಹೆಸರು ಬಹಿರಂಗಗೊಂಡಿದೆ. ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಚೆಸ್ ಮಾಸ್ಟರ್ ವಿ ಆನಂದ್ ಜೊತೆ ಪ್ರದರ್ಶಕ ಪಂದ್ಯವನ್ನಾಡಲಿದ್ದಾರೆ ಎಂದು ಪ್ರಕಟಿಸಿದೆ. ಅಂದ್ಹಾಗೆ, ಈ ಹಿಂದೆಯೇ ವಿಶ್ವನಾಥ್ ಆನಂದ್ ಜೊತೆ ಅಮೀರ್ ಖಾನ್ ಚೆಸ್ ಆಡಿದ್ದಾರೆ. ಚೆಸ್ ಆಟದಲ್ಲಿ ಅಮೀರ್ ಖಾನ್ ಹೆಚ್ಚು ಆಸಕ್ತಿ ಹೊಂದಿದ್ದು, ಚಿತ್ರೀಕರಣದ ಬಿಡುವಿನ ಸಮಯದಲ್ಲೂ ಅಮೀರ್ ಚೆಸ್ ಆಡ್ತಾರೆ ಎಂದು ಸಹಕಲಾವಿದರು ಹೇಳಿಕೊಂಡಿದ್ದಾರೆ.



ಅಮೀರ್ ಖಾನ್ ಮತ್ತು ವಿಶ್ವನಾಥ್ ಅನಂದ್ ಪಂದ್ಯವನ್ನು ಹಿಂದಿ ಚಿತ್ರರಂಗದ ಮತ್ತೊಬ್ಬ ಖ್ಯಾತ ನಟ ಹೃತಿಕ್ ರೋಷನ್ ಪ್ರಚಾರ ಮಾಡುವುದರ ಮೂಲಕ ಚೆಸ್.ಕಾಮ್ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದಾರೆ.
ಜೂನ್ 13 ರಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಸೆಲೆಬ್ರಿಟಿ ಎಡಿಷನ್ ನಡೆಯಲಿದ್ದು, ಆ ಪಂದ್ಯಗಳ ನೇರ ಪ್ರಸಾರ ಚೆಸ್.ಕಾಮ್ ಯೂಟ್ಯೂಬ್ ಚಾನಲ್ನಲ್ಲಿ ಪ್ರಸಾರವಾಗಲಿದೆ.
(Kannada Copy of Filmbeat Kannada)
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm