ಬ್ರೇಕಿಂಗ್ ನ್ಯೂಸ್
09-06-21 04:25 pm Filmbeat : Bharath Kumar K ಸಿನಿಮಾ
ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸೆಲೆಬ್ರಿಟಿಗಳು ಹಲವು ರೀತಿಯಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ದಿನಸಿ ಕಿಟ್, ಆಕ್ಸಿಜನ್, ವೆಂಟಿಲೇಟರ್, ಆಂಬುಲೆನ್ಸ್ ಹೀಗೆ ಅನೇಕ ರೀತಿಯಲ್ಲಿ ನೆರವು ನೀಡಿದ್ದಾರೆ.
ಇದೀಗ, ಚೆಸ್ ಆಟಕ್ಕೆ ಸಂಬಂಧಿಸಿದ ಸಮುದಾಯಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಚೆಸ್.ಕಾಮ್ ಸಂಸ್ಥೆ 'ಚೆಕ್ಮೆಟ್ ಕೋವಿಡ್' ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂಬ ವಿಚಾರ ತಿಳಿದಿದೆ.
ಜೂನ್ 13 ರಂದು ಆ ಕಾಂಪಿಟೇಶನ್ ನಡೆಯಲಿದ್ದು, ಐದು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಭಾರತ ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಎದುರು ಸೆಲೆಬ್ರಿಟಿಗಳು ಚೆಸ್ ಆಡಲಿದ್ದಾರೆ.

ಚೆಸ್.ಕಾಮ್ ವಿಶ್ವನಾಥ್ ಆನಂದ್ ಎದುರು ಆಡಲಿರುವ ಮೊದಲ ಸೆಲೆಬ್ರಿಟಿ ಹೆಸರು ಬಹಿರಂಗಗೊಂಡಿದೆ. ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಚೆಸ್ ಮಾಸ್ಟರ್ ವಿ ಆನಂದ್ ಜೊತೆ ಪ್ರದರ್ಶಕ ಪಂದ್ಯವನ್ನಾಡಲಿದ್ದಾರೆ ಎಂದು ಪ್ರಕಟಿಸಿದೆ. ಅಂದ್ಹಾಗೆ, ಈ ಹಿಂದೆಯೇ ವಿಶ್ವನಾಥ್ ಆನಂದ್ ಜೊತೆ ಅಮೀರ್ ಖಾನ್ ಚೆಸ್ ಆಡಿದ್ದಾರೆ. ಚೆಸ್ ಆಟದಲ್ಲಿ ಅಮೀರ್ ಖಾನ್ ಹೆಚ್ಚು ಆಸಕ್ತಿ ಹೊಂದಿದ್ದು, ಚಿತ್ರೀಕರಣದ ಬಿಡುವಿನ ಸಮಯದಲ್ಲೂ ಅಮೀರ್ ಚೆಸ್ ಆಡ್ತಾರೆ ಎಂದು ಸಹಕಲಾವಿದರು ಹೇಳಿಕೊಂಡಿದ್ದಾರೆ.



ಅಮೀರ್ ಖಾನ್ ಮತ್ತು ವಿಶ್ವನಾಥ್ ಅನಂದ್ ಪಂದ್ಯವನ್ನು ಹಿಂದಿ ಚಿತ್ರರಂಗದ ಮತ್ತೊಬ್ಬ ಖ್ಯಾತ ನಟ ಹೃತಿಕ್ ರೋಷನ್ ಪ್ರಚಾರ ಮಾಡುವುದರ ಮೂಲಕ ಚೆಸ್.ಕಾಮ್ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದಾರೆ.
ಜೂನ್ 13 ರಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಸೆಲೆಬ್ರಿಟಿ ಎಡಿಷನ್ ನಡೆಯಲಿದ್ದು, ಆ ಪಂದ್ಯಗಳ ನೇರ ಪ್ರಸಾರ ಚೆಸ್.ಕಾಮ್ ಯೂಟ್ಯೂಬ್ ಚಾನಲ್ನಲ್ಲಿ ಪ್ರಸಾರವಾಗಲಿದೆ.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm