ಬ್ರೇಕಿಂಗ್ ನ್ಯೂಸ್
10-06-21 10:45 am Shruthi, Filmbeat ಸಿನಿಮಾ
ಭಾರತದ ಮೋಸ್ಟ್ ಡಿಸೈರಬಲ್ ವುಮೆನ್ ಆಗಿ ಹೊರಹೊಮ್ಮಿರುವ ನಟಿ, ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಬಗ್ಗೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಮೋಸ್ಟ್ ಡಿಸೈರಬಲ್ ವುಮೆನ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಬೆನ್ನಲ್ಲೇ ಸಿನಿಮಾ ಆಫರ್ ಗಳು ಕೂಡ ಜಾಸ್ತಿ ಆಗಿದೆ.
ಇದೀಗ ಪೌರಾಣಿಕ ಸಿನಿಮಾದಲ್ಲಿ ನಟಿಸಲು ಅವಕಾಶ ಒದಗಿ ಬಂದಿದೆ ಎನ್ನುವ ಸುದ್ದಿ ವೈರಲ್ ಆಗಿದೆ. ಪೌರಾಣಿಕ ಚಿತ್ರಗಳಲ್ಲಿ ನಟಿಸಲು ಅನೇಕ ಕಲಾವಿದರು ತುದಿಗಾಲಿನಲ್ಲಿ ನಿಂತಿರುತ್ತಾರೆ, ಅನೇಕ ನಟಿಯರ ದೊಡ್ಡ ಕನಸಾಗಿರುತ್ತೆ. ಈಗ ಅಂಥ ದೊಡ್ಡ ಅವಕಾಶ ರಿಯಾಗೆ ಒದಗಿಬಂದಿದೆ. ಮಹಾಭಾರತ ಚಿತ್ರದಲ್ಲಿ ನಟಿಸಲು ರಿಯಾಗೆ ಆಫರ್ ಮಾಡಲಾಗಿದೆ. ಮುಂದೆ ಓದಿ.. ಈ ಅಪ್ಲಿಕೇಶನ್ಗಳನ್ನು ಬಳಸಿದರೆ ನಿಮ್ಮ ಸ್ಮಾರ್ಟ್ಫೋನ್ ಬ್ಯಾಟರಿ ಬಾಳಿಕೆ ಹೆಚ್ಚಾಗಲಿದೆ!

ದ್ರೌಪದಿ ಪಾತ್ರಕ್ಕೆ ರಿಯಾಗೆ ಆಫರ್
ಈಗಾಗಲೇ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ ಮತ್ತು ಬರುತ್ತಿವೆ. ಮಹಾಭಾರತ ಆಧರಿಸಿ ಮಾಡುತ್ತಿರುವ ಸಿನಿಮಾದಲ್ಲಿ ನಟಿಸಲು ರಿಯಾ ಚಕ್ರವರ್ತಿಗೆ ಆಫರ್ ಮಾಡಲಾಗಿದೆಯಂತೆ. ದ್ರೌಪದಿ ಪಾತ್ರಕ್ಕಾಗಿ ಚಿತ್ರತಂಡ ರಿಯಾ ಜೊತೆ ಮಾತುಕತೆ ನಡೆಸುತ್ತಿದೆಯಂತೆ.
ದೊಡ್ಡ ಮಟ್ಟದಲ್ಲಿ ಬರ್ತಿದೆ ಮಹಾಭಾರತ
ಈಗಾಗಲೇ ಸ್ಕ್ರಿಪ್ಟ್ ಅನ್ನು ಸಹ ರಿಯಾಗೆ ಕಳುಹಿಸಲಾಗಿದ್ದು, ಸ್ಕ್ರಿಪ್ಟ್ ಓದುವಲ್ಲಿ ರಿಯಾ ಬ್ಯುಸಿಯಾಗಿದ್ದಾರಂತೆ. ಮೂಲಗಳ ಪ್ರಕಾರ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆಯಂತೆ. ಮಹಾಭಾರತ ಮತ್ತು ದ್ರೌಪದಿ ಪಾತ್ರವನ್ನು ವಿಭಿನ್ನವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆಯಂತೆ. ಈ ಚಿತ್ರದಲ್ಲಿ ರಿಯಾ ನಟಿಸುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.

ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ ರಿಯಾ
ರಿಯಾ ಚಕ್ರವರ್ತಿ ಸದ್ಯ ಹಳೆಯ ಘಟನೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಸುಶಾಂತ್ ಸಿಂಗ್ ಸಾವಿನ ವಿಚಾರವಾಗಿ ನಡೆದ ತನಿಖೆಯಲ್ಲಿ ಜೈಲು ವಾಸ ಅನುಭವಿಸಿ ಬಂದಿರುವ ರಿಯಾ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಇತ್ತೀಚಿಗಷ್ಟೆ ಕೊರೊನಾ ಸಂಕಷ್ಟದಲ್ಲಿರೋರ ಸಹಾಯಕ್ಕೆ ರಿಯಾ ಧಾವಿಸಿದ್ದರು.

ಚೆಹ್ರೆ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ
ಇನ್ನು ರಿಯಾ ಸದ್ಯ ಅಮಿತಾಬ್ ಮತ್ತು ಇಮ್ರಾನ್ ಹಶ್ಮಿ ಜೊತೆ ನಟಿಸಿದ್ದ ಚೆಹ್ರೆ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಆಗಾಗಲೇ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗುತ್ತಿದೆ.
(Kannada Copy of Filmbeat Kannada)
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm