ಬ್ರೇಕಿಂಗ್ ನ್ಯೂಸ್
10-06-21 10:45 am Shruthi, Filmbeat ಸಿನಿಮಾ
ಭಾರತದ ಮೋಸ್ಟ್ ಡಿಸೈರಬಲ್ ವುಮೆನ್ ಆಗಿ ಹೊರಹೊಮ್ಮಿರುವ ನಟಿ, ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಬಗ್ಗೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಮೋಸ್ಟ್ ಡಿಸೈರಬಲ್ ವುಮೆನ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಬೆನ್ನಲ್ಲೇ ಸಿನಿಮಾ ಆಫರ್ ಗಳು ಕೂಡ ಜಾಸ್ತಿ ಆಗಿದೆ.
ಇದೀಗ ಪೌರಾಣಿಕ ಸಿನಿಮಾದಲ್ಲಿ ನಟಿಸಲು ಅವಕಾಶ ಒದಗಿ ಬಂದಿದೆ ಎನ್ನುವ ಸುದ್ದಿ ವೈರಲ್ ಆಗಿದೆ. ಪೌರಾಣಿಕ ಚಿತ್ರಗಳಲ್ಲಿ ನಟಿಸಲು ಅನೇಕ ಕಲಾವಿದರು ತುದಿಗಾಲಿನಲ್ಲಿ ನಿಂತಿರುತ್ತಾರೆ, ಅನೇಕ ನಟಿಯರ ದೊಡ್ಡ ಕನಸಾಗಿರುತ್ತೆ. ಈಗ ಅಂಥ ದೊಡ್ಡ ಅವಕಾಶ ರಿಯಾಗೆ ಒದಗಿಬಂದಿದೆ. ಮಹಾಭಾರತ ಚಿತ್ರದಲ್ಲಿ ನಟಿಸಲು ರಿಯಾಗೆ ಆಫರ್ ಮಾಡಲಾಗಿದೆ. ಮುಂದೆ ಓದಿ.. ಈ ಅಪ್ಲಿಕೇಶನ್ಗಳನ್ನು ಬಳಸಿದರೆ ನಿಮ್ಮ ಸ್ಮಾರ್ಟ್ಫೋನ್ ಬ್ಯಾಟರಿ ಬಾಳಿಕೆ ಹೆಚ್ಚಾಗಲಿದೆ!

ದ್ರೌಪದಿ ಪಾತ್ರಕ್ಕೆ ರಿಯಾಗೆ ಆಫರ್
ಈಗಾಗಲೇ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ ಮತ್ತು ಬರುತ್ತಿವೆ. ಮಹಾಭಾರತ ಆಧರಿಸಿ ಮಾಡುತ್ತಿರುವ ಸಿನಿಮಾದಲ್ಲಿ ನಟಿಸಲು ರಿಯಾ ಚಕ್ರವರ್ತಿಗೆ ಆಫರ್ ಮಾಡಲಾಗಿದೆಯಂತೆ. ದ್ರೌಪದಿ ಪಾತ್ರಕ್ಕಾಗಿ ಚಿತ್ರತಂಡ ರಿಯಾ ಜೊತೆ ಮಾತುಕತೆ ನಡೆಸುತ್ತಿದೆಯಂತೆ.
ದೊಡ್ಡ ಮಟ್ಟದಲ್ಲಿ ಬರ್ತಿದೆ ಮಹಾಭಾರತ
ಈಗಾಗಲೇ ಸ್ಕ್ರಿಪ್ಟ್ ಅನ್ನು ಸಹ ರಿಯಾಗೆ ಕಳುಹಿಸಲಾಗಿದ್ದು, ಸ್ಕ್ರಿಪ್ಟ್ ಓದುವಲ್ಲಿ ರಿಯಾ ಬ್ಯುಸಿಯಾಗಿದ್ದಾರಂತೆ. ಮೂಲಗಳ ಪ್ರಕಾರ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆಯಂತೆ. ಮಹಾಭಾರತ ಮತ್ತು ದ್ರೌಪದಿ ಪಾತ್ರವನ್ನು ವಿಭಿನ್ನವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆಯಂತೆ. ಈ ಚಿತ್ರದಲ್ಲಿ ರಿಯಾ ನಟಿಸುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.

ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ ರಿಯಾ
ರಿಯಾ ಚಕ್ರವರ್ತಿ ಸದ್ಯ ಹಳೆಯ ಘಟನೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಸುಶಾಂತ್ ಸಿಂಗ್ ಸಾವಿನ ವಿಚಾರವಾಗಿ ನಡೆದ ತನಿಖೆಯಲ್ಲಿ ಜೈಲು ವಾಸ ಅನುಭವಿಸಿ ಬಂದಿರುವ ರಿಯಾ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಇತ್ತೀಚಿಗಷ್ಟೆ ಕೊರೊನಾ ಸಂಕಷ್ಟದಲ್ಲಿರೋರ ಸಹಾಯಕ್ಕೆ ರಿಯಾ ಧಾವಿಸಿದ್ದರು.

ಚೆಹ್ರೆ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ
ಇನ್ನು ರಿಯಾ ಸದ್ಯ ಅಮಿತಾಬ್ ಮತ್ತು ಇಮ್ರಾನ್ ಹಶ್ಮಿ ಜೊತೆ ನಟಿಸಿದ್ದ ಚೆಹ್ರೆ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಆಗಾಗಲೇ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗುತ್ತಿದೆ.
(Kannada Copy of Filmbeat Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm