ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm