ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.


ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
03-09-26 09:51 pm
HK News Staffer
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm
ನೀಟ್ ಪರೀಕ್ಷೆ ಅಕ್ರಮ ; ಸುನಿಲ್ ಕುಮಾರ್ ರಾಜೀನಾಮೆಗೆ...
02-09-26 07:18 pm